janadhvani

Kannada Online News Paper

ಉಡುಪಿ: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ನಮ್ಮ ನಾಡ ಒಕ್ಕೂಟ ನಿಯೋಗದ ಮನವಿ

ಉಡುಪಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ರವರಿಗೆ ಉಡುಪಿ ಜಿಲ್ಲೆಯ ಅಲ್ಪಸಂಖ್ಯಾತರ ಇಲಾಖೆ ಗೆ ನೀಡಿರುವ ಅರ್ಜಿಗಳನ್ನು ತ್ವರಿತ ವಿಲೇವಾರಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡಿರುವ ಅರ್ಜಿಗಳನ್ನು ತ್ವರಿತ ಮಂಜೂರಾತಿ ,ಸಂಜಿಲ್ಲಗೆ ನೀಡುವ ಪಲಾನುಭವಿ ಕೋಟಾ ಸಂಖ್ಯೆಯನ್ನು ಹೆಚ್ಚಿಸುವಂತೆ ಹಾಗೂ ಸಾಲದ ಮೊಬಲಗನ್ನು ಹೇಚ್ಚಿಸುವಂತೆ ಸರ್ಕಾರದ ಗಮನಕ್ಕೆ ತರುವಂತೆ ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿಯು ಜಿಲ್ಲಾ ಅಧ್ಯಕ್ಷರಾದ ಮುಸ್ತಾಕ್ ಅಹಮದ್ ನೇತೃತ್ವದಲ್ಲಿ ಮನವಿ ನೀಡಲಾಯಿತು.

ಜಿಲ್ಲಾ ಪ್ರದಾನ ಕಾರ್ಯದರ್ಶಿ ಜಾಹಿರ್ ನಾಕುದ, ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಹುಸೈನ್ ಹೈಕಾಡಿ, ಖಜಾಂಚಿ ನಕ್ವಯಯ್ಯ ಉಡುಪಿ, ಉಪಾಧ್ಯಕ್ಷರಾದ ರಶೀದ್ ಕಾಪು ,ಮಾಜಿ ಉಪಾಧ್ಯಕ್ಷ ಮೊಯ್ದಿನಬ್ಬ
ಯುವ ಘಟಕದ ಸಂಚಾಲಕರಾದ ಅಬ್ದುಲ್ ಖಾದರ್ ಮೂಡ್ ಗೋಪಾಡಿ ಬಶೀರ್ ಅಹ್ಮದ್ ಕೋಟ.ಕೆ.ಪೀ. ಇಬ್ರಾಹಿಮ್ ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com