ದೋಹಾ: ಗಾಝಾದಲ್ಲಿ ಶಾಂತಿ ಮಾತುಕತೆಗಳು ಸಂಕಷ್ಟಗಳಿಂದ ಕೂಡಿವೆ ಎಂದು ಕತಾರ್ ಹೇಳಿದೆ. ಇಸ್ರೇಲ್ ಅನ್ನು ಸಮನ್ವಯದ ಹಾದಿಗೆ ತರುವುದು ಅತ್ಯಂತ ಕಷ್ಟಕರವಾದ ವಿಷಯವಾಗಿತ್ತು. ಗಾಝಾದಲ್ಲಿ ಎಷ್ಟು ಮಂದಿ ಒತ್ತೆಯಾಳುಗಳಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಾಜಿದ್ ಅಲ್ ಅನ್ಸಾರಿ ಹೇಳಿದ್ದಾರೆ.
ಹಿಂದಿನ ಒಪ್ಪಂದದ ನಿಯಮಗಳ ಪ್ರಕಾರದಲ್ಲೇ, ಕದನ ವಿರಾಮವನ್ನು ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಲಾಗಿದೆ. ಆದಾಗ್ಯೂ, ಹಮಾಸ್ ಎಷ್ಟು ಒತ್ತೆಯಾಳುಗಳನ್ನು ಹೊಂದಿದೆ ಎಂಬುದು ಸ್ಪಷ್ಟವಾಗಿಲ್ಲ. ಬಿಡುಗಡೆಯಾದ ಒತ್ತೆಯಾಳುಗಳ ಸಂಖ್ಯೆಯ ಬಗ್ಗೆ ಮಾತ್ರ ಕತಾರ್ ಮಾಹಿತಿ ಹೊಂದಿದೆ ಎಂದು ಮಾಜಿದ್ ಅಲ್ ಅನ್ಸಾರಿ ಹೇಳಿದ್ದಾರೆ.
ಎರಡೂ ಕಡೆಯವರು ತಮ್ಮದೇ ಆದ ಅಗತ್ಯತೆಗಳನ್ನು ಮತ್ತು ಪರಿಗಣನೆಗಳನ್ನು ಹೊಂದಿದ್ದಾರೆ. ಹಾಗಾಗಿ ಮಾತುಕತೆ ಕಠಿಣವಾಗಿತ್ತು. ಕಠಿಣವಾದ ಭಾಗವೆಂದರೆ ಇಸ್ರೇಲ್ ಅನ್ನು ಸಮನ್ವಯಗೊಳಿಸುವುದಾಗಿತ್ತು.
ಗಾಝಾ ಮತ್ತು ವೆಸ್ಟ್ ಬ್ಯಾಂಕ್ ನಲ್ಲಿ ನಿರಂತರ ಸಣ್ಣ ಪ್ರಮಾಣದ ದಾಳಿಗಳು ನಡೆಯುತ್ತಿರುವ ಬಗ್ಗೆ ಗಮನಿಸಲಾಗಿದೆ. ಇದು ಒಪ್ಪಂದದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮಾಜಿದ್ ಅಲ್ ಅನ್ಸಾರಿ ಹೇಳಿದರು.
ಪ್ರಸ್ತುತ ಮಹಿಳೆಯರು ಮತ್ತು ಮಕ್ಕಳನ್ನು ಮುಕ್ತಗೊಳಿಸುವುದು ಮೊದಲ ಆದ್ಯತೆಯಾಗಿದೆ, ಸೈನಿಕರ ಬಿಡುಗಡೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಕದನ ವಿರಾಮವನ್ನು ವಿಸ್ತರಿಸಬೇಕಾದರೆ, ಹಮಾಸ್ ದಿನಕ್ಕೆ 10 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಸಿದ್ಧರಾಗಿರಬೇಕು. ಗಾಝಾದಲ್ಲಿ ಒತ್ತೆಯಾಳುಗಳ ವಿನಿಮಯ ಮತ್ತು ಒತ್ತೆಯಾಳುಗಳನ್ನು ತಲುಪಿಸುವುದು ಬಹಳ ಕಷ್ಟಕರವಾದ ಸಂಗತಿಯಾಗಿದೆ ಎಂದು ಮಾಜಿದ್ ಅಲ್-ಅನ್ಸಾರಿ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ