ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿ ಮುಹಮ್ಮದ್ ರಫೀಕ್ರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
22/11/2023ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಕುಟುಂಬಸ್ಥರಾದ ಅಸ್ಲಂ ಬ್ರಹ್ಮಾವರ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.
ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಬತ್ತಾ ಸೆಕ್ಟರ್ ಶಿಕ್ಷಣ ಇಲಾಖೆ ಅಧ್ಯಕ್ಷರಾದ ಅಬ್ದುಲ್ಲಾ ಮದನಿ ಉಸ್ತಾದರ ನೇತೃತ್ವದಲ್ಲಿ ಯೂಸುಫ್ ಹಾಜಿ ಕಳಂಜಿಬೈಲ್, ಹಂಝ ಮೈಂದಾಳ, ಅಝೀಝ್ ಮೂಡಿಗೆರೆ ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ