ಬೆಂಗಳೂರು: ಪಾಸ್ಪೋರ್ಟ್ ನವೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣ ಸಾಧ್ಯವಿಲ್ಲ ಎಂದಿದೆ. ತಾಯಿಯ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ ತುಮಕೂರಿನ ವ್ಯಕ್ತಿಯ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗದು ಎಂದು ಕೋರ್ಟ್ ಆದೇಶಿಸಿದೆ.
ಪಾಸ್ಪೋರ್ಟ್ ನವೀಕರಣವನ್ನು ನಿರಾಕರಿಸಿ, ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಕೋರ್ಟ್ ಆದೇಶದಲ್ಲಿ ಎತ್ತಿಹಿಡಿದಿದೆ. ಸೆಷನ್ಸ್ ಕೋರ್ಟ್ ಮುಂದೆ ಕ್ರಿಮಿನಲ್ ಪ್ರಕರಣ ಬಾಕಿ ಇರುವ ಸಂತೋಷ್ ಬೀಜಾಡಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
“ಪಾಸ್ಪೋರ್ಟ್ ಕಾಯಿದೆಯ ಯಾವುದೇ ನಿಯಮಗಳಲ್ಲಿ ಪಾಸ್ಪೋರ್ಟ್ ವಿತರಣೆ/ ನವೀಕರಣಕ್ಕೆ ಬಾಕಿ ಇರುವ ಕ್ರಿಮಿನಲ್ ಕೇಸ್ ಅನ್ನು ಅಲಕ್ಷಿಸುವ ಯಾವುದೇ ಪ್ರತ್ಯೇಕ ಮಾನದಂಡವಿಲ್ಲ”. ಈ ಹಿಂದೆ ಹೈಕೋರ್ಟ್ನ ಮೂರು ಪ್ರತ್ಯೇಕ ಏಕಸದಸ್ಯಪೀಠಗಳು, ಕ್ರಿಮಿನಲ್ ಪ್ರಕರಣ ಬಾಕಿ ಇರುವುದು ಪಾಸ್ಪೋರ್ಟ್ ನವೀಕರಣಕ್ಕೆ ಅಡ್ಡಿಯಲ್ಲ ಎಂದು ಆದೇಶಿಸಿದ್ದವು. ಆದರೆ ಇದೀಗ ಕೋರ್ಟ್ ಕ್ರಿಮಿನಲ್ ಕೇಸ್ ಇರುವುದು ಅಡ್ಡಿ ಎಂದು ಹೇಳುವ ಮೂಲಕ ಭಿನ್ನವಾದ ತೀರ್ಪು ನೀಡಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ