ಬೆಂಗಳೂರು: ಪಾಸ್ಪೋರ್ಟ್ ನವೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣ ಸಾಧ್ಯವಿಲ್ಲ ಎಂದಿದೆ. ತಾಯಿಯ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ ತುಮಕೂರಿನ ವ್ಯಕ್ತಿಯ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗದು ಎಂದು ಕೋರ್ಟ್ ಆದೇಶಿಸಿದೆ.
ಪಾಸ್ಪೋರ್ಟ್ ನವೀಕರಣವನ್ನು ನಿರಾಕರಿಸಿ, ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಕೋರ್ಟ್ ಆದೇಶದಲ್ಲಿ ಎತ್ತಿಹಿಡಿದಿದೆ. ಸೆಷನ್ಸ್ ಕೋರ್ಟ್ ಮುಂದೆ ಕ್ರಿಮಿನಲ್ ಪ್ರಕರಣ ಬಾಕಿ ಇರುವ ಸಂತೋಷ್ ಬೀಜಾಡಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
“ಪಾಸ್ಪೋರ್ಟ್ ಕಾಯಿದೆಯ ಯಾವುದೇ ನಿಯಮಗಳಲ್ಲಿ ಪಾಸ್ಪೋರ್ಟ್ ವಿತರಣೆ/ ನವೀಕರಣಕ್ಕೆ ಬಾಕಿ ಇರುವ ಕ್ರಿಮಿನಲ್ ಕೇಸ್ ಅನ್ನು ಅಲಕ್ಷಿಸುವ ಯಾವುದೇ ಪ್ರತ್ಯೇಕ ಮಾನದಂಡವಿಲ್ಲ”. ಈ ಹಿಂದೆ ಹೈಕೋರ್ಟ್ನ ಮೂರು ಪ್ರತ್ಯೇಕ ಏಕಸದಸ್ಯಪೀಠಗಳು, ಕ್ರಿಮಿನಲ್ ಪ್ರಕರಣ ಬಾಕಿ ಇರುವುದು ಪಾಸ್ಪೋರ್ಟ್ ನವೀಕರಣಕ್ಕೆ ಅಡ್ಡಿಯಲ್ಲ ಎಂದು ಆದೇಶಿಸಿದ್ದವು. ಆದರೆ ಇದೀಗ ಕೋರ್ಟ್ ಕ್ರಿಮಿನಲ್ ಕೇಸ್ ಇರುವುದು ಅಡ್ಡಿ ಎಂದು ಹೇಳುವ ಮೂಲಕ ಭಿನ್ನವಾದ ತೀರ್ಪು ನೀಡಿದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ