ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಭಯೋತ್ಪಾದಕ ನಂಟು ಆರೋಪಿಸುತ್ತಿರುವ ಬಿಜಾಪುರ್ ಷರೀಫ್ ನ ಸೂಫಿ ವಿದ್ವಾಂಸ ಸಯ್ಯಿದ್ ಮುಹಮ್ಮದ್ ತನ್ವೀರ್ ಪೀರಾ ಹಾಶ್ಮಿ ಅವರಿಬ್ಬರೂ ಉದ್ಯಮವೊಂದರ ಪಾಲುದಾರರಾಗಿದ್ದಾರೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.
ಯತ್ನಾಳ್ ಹಾಗೂ ತನ್ವೀರ್ ಹಾಶ್ಮಿ ನಗರದ ಗಾಂಧಿಚೌಕದ ಬಳಿಯಿರುವ ‘ಟೂರಿಸ್ಟ್ ಹೋಟೆಲ್’ನ ಪಾಲುದಾರರಾಗಿದ್ದಾರೆ. ನಗರದ ಹೊರವಲಯದ ಮಹಲ್ ಐನಾಪುರ ಗ್ರಾಮದ ವಿಜಯಪುರ–ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಇಬ್ಬರ ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳು ಅಕ್ಕಪಕ್ಕದಲ್ಲಿವೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಅವರು, ‘ಟೂರಿಸ್ಟ್ ಹೋಟೆಲ್ನಲ್ಲಿ ಶಾಸಕ ಯತ್ನಾಳ್ ಮತ್ತು ತನ್ವೀರ್ ಹಾಶ್ಮಿ ಅವರ ಕುಟುಂಬದವರು ಪಾಲುದಾರಾಗಿರುವಾಗ ಮೌಲ್ವಿ ವಿರುದ್ಧ ಆರೋಪಿಸುವ ನೈತಿಕತೆ ಯತ್ನಾಳರಿಗೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.
‘ಹಾಶ್ಮಿಯವರು ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂಬುದು ಗೊತ್ತಿದ್ದಿದ್ದರೆ, ಇಷ್ಟು ವರ್ಷ ಏಕೆ ಯತ್ನಾಳ್ ಸುಮ್ಮನಿದ್ದರು? ಒಂದೋ ಯತ್ನಾಳ್ ಅವರು ಆರೋಪ ಸಾಬೀತು ಪಡಿಸಬೇಕು, ಇಲ್ಲವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರವು ಅವರ ವಿರುದ್ಧ ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು’ ಎಂದು ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಮುಲ್ಲಾ, ‘ಯತ್ನಾಳ್ ಅವರು ಹಾಶ್ಮಿ ಅವರೊಂದಿಗೆ ಹೆಚ್ಚು ಒಡನಾಟವಿರಿಸಿಕೊಂಡಿದ್ದರು. ಚುನಾವಣೆ ಸಂದರ್ಭದಲ್ಲಿ ತನ್ವೀರ್ ಹಾಶ್ಮಿ ಮತ್ತು ಯತ್ನಾಳ್ ಅವರನ್ನು ನಮ್ಮ ಮನೆಯಲ್ಲೇ ಖುದ್ದು ಭೇಟಿ ಮಾಡಿಸಿದ್ದೇನೆ. ಒಟ್ಟಿಗೆ ಊಟ ಮಾಡಿದ್ದಾರೆ. ಇಬ್ಬರೂ ಹಲವು ವೇದಿಕೆ ಹಂಚಿಕೊಂಡಿದ್ದಾರೆ’ ಎಂದರು.
‘ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹಾಶ್ಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಇದ್ದರು ಎಂಬ ಒಂದೇ ಕಾರಣಕ್ಕೆ ಯತ್ನಾಳ್ ಅವರು, ಹಾಶ್ಮಿಯವರ ಫೇಸ್ಬುಕ್ನಲ್ಲಿರುವ ಚಿತ್ರಗಳನ್ನು ಇಟ್ಟುಕೊಂಡು ಐಸಿಸ್ ಜೊತೆ ನಂಟಿದೆ ಎಂದು ಅಪಪ್ರಚಾರ ಮಾಡಿ, ದ್ವೇಷ ಸಾಧಿಸುತ್ತಿರುವುದು ಖಂಡನೀಯ’ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಹೇಳಿದ್ದಾರೆ.
ಸೂಫಿ ವಿದ್ವಾಂಸ ತನ್ವೀರ್ ಹಾಶ್ಮಿಯವರು ಇರಾಕ್ ಸಂದರ್ಶನ ವೇಳೆ ಅಲ್ಲಿರುವ ವಿವಿಧ ಸೂಫಿ ಸಂತರ ದರ್ಗಾಗಳಿಗೆ ಭೇಟಿ ನೀಡಿ ಅಲ್ಲಿನ ಧರ್ಮ ಗುರುಗಳಿಂದ ಆಶೀರ್ವಾದ ಪಡೆದಿದ್ದ ಫೋಟೋವನ್ನು ತಮ್ಮ ಫೇಸ್ಬುಕ್ ಪೇಜಿನಲ್ಲಿ ಹಂಚಿಕೊಂಡಿದ್ದರು. ಇದನ್ನೇ ಭಯೋತ್ಪಾದಕ ನಂಟೆಂದು ಬಿಂಬಿಸಿದ ಯತ್ನಾಳ್ ರ ಪರವಾಗಿ ಕೆಲವು ಲಜ್ಜೆಗೆಟ್ಟ ಕನ್ನಡ ದೃಶ್ಯ ಮಾಧ್ಯಮಗಳು ಚರ್ಚೆಗಿಳಿದು ಇದೀಗ ನಗೆ ಪಾಟಲಿಗೀಡಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್