ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಭಯೋತ್ಪಾದಕ ನಂಟು ಆರೋಪಿಸುತ್ತಿರುವ ಬಿಜಾಪುರ್ ಷರೀಫ್ ನ ಸೂಫಿ ವಿದ್ವಾಂಸ ಸಯ್ಯಿದ್ ಮುಹಮ್ಮದ್ ತನ್ವೀರ್ ಪೀರಾ ಹಾಶ್ಮಿ ಅವರಿಬ್ಬರೂ ಉದ್ಯಮವೊಂದರ ಪಾಲುದಾರರಾಗಿದ್ದಾರೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.
ಯತ್ನಾಳ್ ಹಾಗೂ ತನ್ವೀರ್ ಹಾಶ್ಮಿ ನಗರದ ಗಾಂಧಿಚೌಕದ ಬಳಿಯಿರುವ ‘ಟೂರಿಸ್ಟ್ ಹೋಟೆಲ್’ನ ಪಾಲುದಾರರಾಗಿದ್ದಾರೆ. ನಗರದ ಹೊರವಲಯದ ಮಹಲ್ ಐನಾಪುರ ಗ್ರಾಮದ ವಿಜಯಪುರ–ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಇಬ್ಬರ ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳು ಅಕ್ಕಪಕ್ಕದಲ್ಲಿವೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಅವರು, ‘ಟೂರಿಸ್ಟ್ ಹೋಟೆಲ್ನಲ್ಲಿ ಶಾಸಕ ಯತ್ನಾಳ್ ಮತ್ತು ತನ್ವೀರ್ ಹಾಶ್ಮಿ ಅವರ ಕುಟುಂಬದವರು ಪಾಲುದಾರಾಗಿರುವಾಗ ಮೌಲ್ವಿ ವಿರುದ್ಧ ಆರೋಪಿಸುವ ನೈತಿಕತೆ ಯತ್ನಾಳರಿಗೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.
‘ಹಾಶ್ಮಿಯವರು ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂಬುದು ಗೊತ್ತಿದ್ದಿದ್ದರೆ, ಇಷ್ಟು ವರ್ಷ ಏಕೆ ಯತ್ನಾಳ್ ಸುಮ್ಮನಿದ್ದರು? ಒಂದೋ ಯತ್ನಾಳ್ ಅವರು ಆರೋಪ ಸಾಬೀತು ಪಡಿಸಬೇಕು, ಇಲ್ಲವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರವು ಅವರ ವಿರುದ್ಧ ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು’ ಎಂದು ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಮುಲ್ಲಾ, ‘ಯತ್ನಾಳ್ ಅವರು ಹಾಶ್ಮಿ ಅವರೊಂದಿಗೆ ಹೆಚ್ಚು ಒಡನಾಟವಿರಿಸಿಕೊಂಡಿದ್ದರು. ಚುನಾವಣೆ ಸಂದರ್ಭದಲ್ಲಿ ತನ್ವೀರ್ ಹಾಶ್ಮಿ ಮತ್ತು ಯತ್ನಾಳ್ ಅವರನ್ನು ನಮ್ಮ ಮನೆಯಲ್ಲೇ ಖುದ್ದು ಭೇಟಿ ಮಾಡಿಸಿದ್ದೇನೆ. ಒಟ್ಟಿಗೆ ಊಟ ಮಾಡಿದ್ದಾರೆ. ಇಬ್ಬರೂ ಹಲವು ವೇದಿಕೆ ಹಂಚಿಕೊಂಡಿದ್ದಾರೆ’ ಎಂದರು.
‘ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹಾಶ್ಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಇದ್ದರು ಎಂಬ ಒಂದೇ ಕಾರಣಕ್ಕೆ ಯತ್ನಾಳ್ ಅವರು, ಹಾಶ್ಮಿಯವರ ಫೇಸ್ಬುಕ್ನಲ್ಲಿರುವ ಚಿತ್ರಗಳನ್ನು ಇಟ್ಟುಕೊಂಡು ಐಸಿಸ್ ಜೊತೆ ನಂಟಿದೆ ಎಂದು ಅಪಪ್ರಚಾರ ಮಾಡಿ, ದ್ವೇಷ ಸಾಧಿಸುತ್ತಿರುವುದು ಖಂಡನೀಯ’ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಹೇಳಿದ್ದಾರೆ.
ಸೂಫಿ ವಿದ್ವಾಂಸ ತನ್ವೀರ್ ಹಾಶ್ಮಿಯವರು ಇರಾಕ್ ಸಂದರ್ಶನ ವೇಳೆ ಅಲ್ಲಿರುವ ವಿವಿಧ ಸೂಫಿ ಸಂತರ ದರ್ಗಾಗಳಿಗೆ ಭೇಟಿ ನೀಡಿ ಅಲ್ಲಿನ ಧರ್ಮ ಗುರುಗಳಿಂದ ಆಶೀರ್ವಾದ ಪಡೆದಿದ್ದ ಫೋಟೋವನ್ನು ತಮ್ಮ ಫೇಸ್ಬುಕ್ ಪೇಜಿನಲ್ಲಿ ಹಂಚಿಕೊಂಡಿದ್ದರು. ಇದನ್ನೇ ಭಯೋತ್ಪಾದಕ ನಂಟೆಂದು ಬಿಂಬಿಸಿದ ಯತ್ನಾಳ್ ರ ಪರವಾಗಿ ಕೆಲವು ಲಜ್ಜೆಗೆಟ್ಟ ಕನ್ನಡ ದೃಶ್ಯ ಮಾಧ್ಯಮಗಳು ಚರ್ಚೆಗಿಳಿದು ಇದೀಗ ನಗೆ ಪಾಟಲಿಗೀಡಾಗಿದೆ.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ