ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ಮಹಾಸಭೆಯು ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಜ. ಕೆ.ಯು ಇಬ್ರಾಹಿಂ ಕಾಜೂರು ಇವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದರಸ ಹಾಲ್ ನಲ್ಲಿ ನಡೆಯಿತು. ಸ್ಥಳೀಯ ಇಮಾಂ ಶರೀಫ್ ಸಖಾಫಿ ಉಜಿರ್ಬೆಟ್ಟು ದುಆ ಹಾಗೂ ಉದ್ಘಾಟನೆ ಮಾಡಿದರು .

ಕಾಜೂರು ದರ್ಗಾ ಶರೀಫ್ ಆಡಳಿತ ಸಮಿತಿ ಪ್ರದಾನ ಕಾರ್ಯದರ್ಶಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಜೆ.ಎಚ್ ಅಬೂಬಕರ್ ಸಿದ್ದೀಕ್ ಕಾಜೂರ್ , ಕೋಶಾಧಿಕಾರಿ ಮುಹಮ್ಮದ್ ಕಮಾಲ್ ಕಾಜೂರು ಇವರ ಗೌರವ ಉಪಸ್ಥಿತಿಯೊಂದಿಗೆ ನಡೆದ ಮಹಾಸಭೆಯಲ್ಲಿ ಹಿಂದಿನ ಸಮಿತಿಯ ಕಾರ್ಯ ಚಟುವಟಿಕೆಗಳನ್ನು ಚರ್ಚಿಸಿ ಸಭೆಯ ಸರ್ವಾನುಮತದಂತೆ ಈ ಹಿಂದಿನ ಸಮಿತಿಯನ್ನೇ ಪುನರಾಯ್ಕೆ ಮಾಡಲಾಯಿತು.
ಅದರಂತೆ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಪ್ರಧಾನ ಕಾರ್ಯದರ್ಶಿ ಎ.ಯು ಮುಹಮ್ಮದ್ ಅಲಿ ಅಶ್ವತ್ತಡಿ, ಕೋಶಾಧಿಕಾರಿ ಎನ್ ಎ ಪುತ್ತಬ್ಬ ಅಡ್ಕ , ಉಪಾಧ್ಯಕ್ಷರು ಅಬ್ದುಲ್ ಖಾದರ್ ಪಯ್ಯೆ , ಕಾರ್ಯದರ್ಶಿ ನಿಝಾಮುದ್ದೀನ್ ಅಜಲ್ದಕ್ಕಿ ಸಹಿತ ವಿರುವ 11 ಸದಸ್ಯರನ್ನೊಳಗೊಂಡ ಉತ್ತಮ ಸಮಿತಿಯನ್ನು ರಚಿಸಲಾಯಿತು.
ಸಮಿತಿ ಅಧ್ಯಕ್ಷರಿಂದ ಧನ್ಯವಾದದೊಂದಿಗೆ ಸಭೆಯು ಮುಕ್ತಯವಾಯಿತು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ