ಮಕ್ಕತುಲ್ ಮುಕರ್ರಮಃ: ದುರಸ್ತಿ ಕಾಮಗಾರಿ ಪೂರ್ಣಗೊಂಡು ಮಕ್ಕಾದಲ್ಲಿರುವ ಕಅಬಾ ಸುತ್ತಲಿನ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿಲಾಯಿತು. ಇನ್ನು ಮುಂದೆ ವಿಶ್ವಾಸಿಗಳಿಗೆ ಎಂದಿನಂತೆ ಕಅಬಾ ಮತ್ತು ಹಜರುಲ್ ಅಸ್ ವದ್ ಅನ್ನು ಸ್ಪರ್ಶಿಸಲು ಸಾಧ್ಯವಾಗಲಿದೆ.
ದುರಸ್ತಿಗಾಗಿ ಕಳೆದ ಶನಿವಾರ ಬೆಳಗ್ಗೆಯಿಂದಲೇ ಕಅಬಾದ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಒಂದು ವಾರದಿಂದ ನಡೆದ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿ ಇಂದು ಜುಮಾ ನಮಾಝಿನ ಬಳಿಕ ಬ್ಯಾರಿಕೇಡ್ ಗಳನ್ನು ತೆಗೆಯಲಾಯಿತು. ಕಅಬಾದ ಹೊರ ಗೋಡೆಗಳು, ಛಾವಣಿ ಮತ್ತು ಬಾಗಿಲುಗಳು, ಕಾಬಾವನ್ನು ಆವರಿಸಿರುವ ಕಿಸ್ವಾ ಮತ್ತು ಉತ್ತರದಲ್ಲಿ ಹಿಜ್ರ್ ಇಸ್ಮಾಯಿಲ್ ನಲ್ಲಿ ಮುಖ್ಯವಾಗಿ ದುರಸ್ತಿ ಕಾರ್ಯ ನಡೆಸಲಾಗಿದೆ.
ಬ್ಯಾರಿಕೇಡ್ಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿರುವುದರಿಂದ, ವಿಶ್ವಾಸಿಗಳಿಗೆ ಹಜರುಲ್ ಅಸ್-ವದ್ ಸೇರಿದಂತೆ ಸಂಪೂರ್ಣ ಕಅಬಾವನ್ನು ವೀಕ್ಷಿಸಲು ಮತ್ತು ಸ್ಪರ್ಶಿಸಲು ಸಾಧ್ಯವಾಗಲಿದೆ. ವಿಶೇಷವಾಗಿ ತರಬೇತಿ ಪಡೆದ ತಜ್ಞರ ನೇತೃತ್ವದಲ್ಲಿ ಹಣಕಾಸು ಸಚಿವಾಲಯ ಮತ್ತು ಇತರ ಸರ್ಕಾರಿ ಏಜೆನ್ಸಿಗಳ ಮೇಲ್ವಿಚಾರಣೆಯಲ್ಲಿ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ