janadhvani

Kannada Online News Paper

ಕೆಸಿಎಫ್ ಬಹರೈನ್ ವತಿಯಿಂದ ಬಹರೈನಿನ 52 ನೇ ರಾಷ್ಟ್ರೀಯ ದಿನಾಚರಣೆ

ಮನಾಮ: ಕೆಸಿಎಫ್ ಬಹರೈನ್ ವತಿಯಿಂದ ಅರಾದ್ ಜಾಮಿಯಾ ಮಸೀದಿಯ ಮಜ್ಲಿಸಿನಲ್ಲಿ ಬಹರೈನಿನ 52 ನೇ ರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕರ್ತರು ಧ್ವಜ ಪ್ರದರ್ಶನ ನಡೆಸಿದರು.

ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಪ್ರಾಸ್ತಾವಿಕವಾಗಿ ಮಾತನಾಡಿ ಬಹರೈನಿನಲ್ಲಿ ನಮಗೆ ಎಲ್ಲಾ ರೀತಿಯ ಧಾರ್ಮಿಕ ಹಾಗೂ ಸಾಂತ್ವನ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲತೆಯನ್ನು ಹೊಂದಿದ ವಾತಾವರಣ ಇಲ್ಲಿದೆ. ಆದುದರಿಂದ ಈ ರಾಷ್ಟ್ರಕ್ಕೆ ನಾವು ಕೃತಜ್ಞತರಾಗಬೇಕಾಗಿದೆ ಎಂದು ಹೇಳಿದ ಅವರು ಈ ರಾಷ್ಟ್ರಕ್ಕೆ ಗೌರವ ಸಲ್ಲಿಸಿ ಎಲ್ಲರಿಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ವತಿಯಿಂದ ರಾಷ್ಟ್ರೀಯ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಕೆಸಿಎಫ್ ಐಸಿ ಫೈನಾನ್ಸಿಯಲ್ ಕಂಟ್ರೋಲರ್ ಅಲೀ ಮುಸ್ಲಿಯಾರ್ ಕೊಡಗು ರಾಷ್ಟ್ರೀಯ ದಿನಾಚರಣೆಗೆ ಶುಭ ಹಾರೈಸಿದರು.
ಕೆಸಿಎಫ್ ಬಹರೈನ್ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ಕಾರ್ಯಕ್ರಮ ನಿರೂಪಿಸಿದರು.
ಕೆಸಿಎಫ್ ಕ್ಯಾಬಿನೆಟ್, ರಾಷ್ಟ್ರೀಯ ಮುಖಂಡರು, ಝೋನ್, ಸೆಕ್ಟರುಗಳ ನಾಯಕರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚಂದಗಾಣಿಸಿ ಕೊಟ್ಟರು.

📝ಎಂ.ಎ. ವೇಣೂರು, ಬಹರೈನ್.

error: Content is protected !! Not allowed copy content from janadhvani.com