ಮನಾಮ: ಕೆಸಿಎಫ್ ಬಹರೈನ್ ವತಿಯಿಂದ ಅರಾದ್ ಜಾಮಿಯಾ ಮಸೀದಿಯ ಮಜ್ಲಿಸಿನಲ್ಲಿ ಬಹರೈನಿನ 52 ನೇ ರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕರ್ತರು ಧ್ವಜ ಪ್ರದರ್ಶನ ನಡೆಸಿದರು.
ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಪ್ರಾಸ್ತಾವಿಕವಾಗಿ ಮಾತನಾಡಿ ಬಹರೈನಿನಲ್ಲಿ ನಮಗೆ ಎಲ್ಲಾ ರೀತಿಯ ಧಾರ್ಮಿಕ ಹಾಗೂ ಸಾಂತ್ವನ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲತೆಯನ್ನು ಹೊಂದಿದ ವಾತಾವರಣ ಇಲ್ಲಿದೆ. ಆದುದರಿಂದ ಈ ರಾಷ್ಟ್ರಕ್ಕೆ ನಾವು ಕೃತಜ್ಞತರಾಗಬೇಕಾಗಿದೆ ಎಂದು ಹೇಳಿದ ಅವರು ಈ ರಾಷ್ಟ್ರಕ್ಕೆ ಗೌರವ ಸಲ್ಲಿಸಿ ಎಲ್ಲರಿಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ವತಿಯಿಂದ ರಾಷ್ಟ್ರೀಯ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.
ಕೆಸಿಎಫ್ ಐಸಿ ಫೈನಾನ್ಸಿಯಲ್ ಕಂಟ್ರೋಲರ್ ಅಲೀ ಮುಸ್ಲಿಯಾರ್ ಕೊಡಗು ರಾಷ್ಟ್ರೀಯ ದಿನಾಚರಣೆಗೆ ಶುಭ ಹಾರೈಸಿದರು.
ಕೆಸಿಎಫ್ ಬಹರೈನ್ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ಕಾರ್ಯಕ್ರಮ ನಿರೂಪಿಸಿದರು.
ಕೆಸಿಎಫ್ ಕ್ಯಾಬಿನೆಟ್, ರಾಷ್ಟ್ರೀಯ ಮುಖಂಡರು, ಝೋನ್, ಸೆಕ್ಟರುಗಳ ನಾಯಕರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚಂದಗಾಣಿಸಿ ಕೊಟ್ಟರು.
📝ಎಂ.ಎ. ವೇಣೂರು, ಬಹರೈನ್.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ