ಮನಾಮ: ಕೆಸಿಎಫ್ ಬಹರೈನ್ ವತಿಯಿಂದ ಅರಾದ್ ಜಾಮಿಯಾ ಮಸೀದಿಯ ಮಜ್ಲಿಸಿನಲ್ಲಿ ಬಹರೈನಿನ 52 ನೇ ರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕರ್ತರು ಧ್ವಜ ಪ್ರದರ್ಶನ ನಡೆಸಿದರು.
ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಪ್ರಾಸ್ತಾವಿಕವಾಗಿ ಮಾತನಾಡಿ ಬಹರೈನಿನಲ್ಲಿ ನಮಗೆ ಎಲ್ಲಾ ರೀತಿಯ ಧಾರ್ಮಿಕ ಹಾಗೂ ಸಾಂತ್ವನ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲತೆಯನ್ನು ಹೊಂದಿದ ವಾತಾವರಣ ಇಲ್ಲಿದೆ. ಆದುದರಿಂದ ಈ ರಾಷ್ಟ್ರಕ್ಕೆ ನಾವು ಕೃತಜ್ಞತರಾಗಬೇಕಾಗಿದೆ ಎಂದು ಹೇಳಿದ ಅವರು ಈ ರಾಷ್ಟ್ರಕ್ಕೆ ಗೌರವ ಸಲ್ಲಿಸಿ ಎಲ್ಲರಿಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ವತಿಯಿಂದ ರಾಷ್ಟ್ರೀಯ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.
ಕೆಸಿಎಫ್ ಐಸಿ ಫೈನಾನ್ಸಿಯಲ್ ಕಂಟ್ರೋಲರ್ ಅಲೀ ಮುಸ್ಲಿಯಾರ್ ಕೊಡಗು ರಾಷ್ಟ್ರೀಯ ದಿನಾಚರಣೆಗೆ ಶುಭ ಹಾರೈಸಿದರು.
ಕೆಸಿಎಫ್ ಬಹರೈನ್ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ಕಾರ್ಯಕ್ರಮ ನಿರೂಪಿಸಿದರು.
ಕೆಸಿಎಫ್ ಕ್ಯಾಬಿನೆಟ್, ರಾಷ್ಟ್ರೀಯ ಮುಖಂಡರು, ಝೋನ್, ಸೆಕ್ಟರುಗಳ ನಾಯಕರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚಂದಗಾಣಿಸಿ ಕೊಟ್ಟರು.
📝ಎಂ.ಎ. ವೇಣೂರು, ಬಹರೈನ್.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು