ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ(ನಾಳೆ) ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್’ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ JN.1 ಕೋವಿಡ್ ಹೊಸ ಉಪತಳಿಯೂ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ, ಗಡಿ ಜಿಲ್ಲೆಗಳಾದ ಮಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಆತಂಕದ ಛಾಯೆ ಆವರಿಸಿದೆ.
ಉಳ್ಳಾಲ ತಾಲೂಕಿನ ತಲಪಾಡಿ ಮುಖ್ಯ ಗಡಿಯಾಗಿದ್ದು, ಸುಳ್ಯ, ಬಂಟ್ವಾಳ ತಾಲೂಕಿನಲ್ಲಿ ಸಾಕಷ್ಟು ಗಡಿ ಪ್ರದೇಶಗಳು ಇವೆ. ವಿವಿಧ ಕೆಲಸ ಕಾರ್ಯಗಳಿಗೆ ಮಾತ್ರವಲ್ಲದೆ ವಿವಿಧ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಪ್ರತಿನಿತ್ಯ ಸಾವಿರಾರು ಮಂದಿ ಕೇರಳದಿಂದ ಜಿಲ್ಲೆಗೆ ಬಂದು ಹೋಗುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಸೇರುತ್ತಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಮೂಡಿದೆ. ಹೊಸ ವರ್ಷ ಮತ್ತು ಕ್ರಿಸ್ಮಸ್ ಹಬ್ಬ ನೋಡಿಕೊಂಡು ಕೊರೊನಾ ಜಾಗೃತಿಗಾಗಿ ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯು ಹೊಸ ರೂಪಾಂತರವು ಪ್ರತಿರಕ್ಷಣಾ ವ್ಯವಸ್ಥೆಗಳನ್ನು ತಪ್ಪಿಸುವಲ್ಲಿ ಉತ್ತಮವಾಗಿದೆ ಎಂಬುದನ್ನು ಸೂಚಿಸುತ್ತದೆ ”ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸದಸ್ಯರೊಬ್ಬರು ಹೇಳಿದ್ದಾರೆ.
ಸೋಂಕು ಏರಿಕೆ ಕುರಿತು ಭಯಭೀತರಾಗುವ ಅಗತ್ಯವಿಲ್ಲ. ಜನರು ಮಾಸ್ಕ್ ಧರಿಸುವುದು, ಜನದಟ್ಟಣೆ ಇರುವ ಪ್ರದೇಶದಿಂದ ದೂರ ಇರುವುದು ಹಾಗೂ ಕೋವಿಡ್ ಸೂಕ್ತ ನಡವಳಿಕೆಯ್ನು ಅನುಸರಿಸುವುದರಿಂದ ಸೋಂಕಿನಿಂದ ದೂರ ಉಳಿಯಬಹುದು. ಹೊಸ ವರ್ಷ ಸಂಭ್ರಮ ವೇಳೆ ಹೆಚ್ಚೆಚ್ಚು ಜನರು ಸೇರುವುದರಿಂದ ಇದಕ್ಕೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಆಕ್ಟೀವ್ ಕೇಸ್ಗಳ ಸಂಖ್ಯೆ 1,300 ಗಡಿ ದಾಟಿದೆ. ಒಂದು ಕಡೆ ಕೇರಳದಲ್ಲೂ ಪ್ರತಿನಿತ್ಯ 300ಕ್ಕೂ ಹೆಚ್ಚು ಕೇಸ್ಗಳು ದಾಖಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)