ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ(ನಾಳೆ) ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್’ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ JN.1 ಕೋವಿಡ್ ಹೊಸ ಉಪತಳಿಯೂ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ, ಗಡಿ ಜಿಲ್ಲೆಗಳಾದ ಮಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಆತಂಕದ ಛಾಯೆ ಆವರಿಸಿದೆ.
ಉಳ್ಳಾಲ ತಾಲೂಕಿನ ತಲಪಾಡಿ ಮುಖ್ಯ ಗಡಿಯಾಗಿದ್ದು, ಸುಳ್ಯ, ಬಂಟ್ವಾಳ ತಾಲೂಕಿನಲ್ಲಿ ಸಾಕಷ್ಟು ಗಡಿ ಪ್ರದೇಶಗಳು ಇವೆ. ವಿವಿಧ ಕೆಲಸ ಕಾರ್ಯಗಳಿಗೆ ಮಾತ್ರವಲ್ಲದೆ ವಿವಿಧ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಪ್ರತಿನಿತ್ಯ ಸಾವಿರಾರು ಮಂದಿ ಕೇರಳದಿಂದ ಜಿಲ್ಲೆಗೆ ಬಂದು ಹೋಗುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಸೇರುತ್ತಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಮೂಡಿದೆ. ಹೊಸ ವರ್ಷ ಮತ್ತು ಕ್ರಿಸ್ಮಸ್ ಹಬ್ಬ ನೋಡಿಕೊಂಡು ಕೊರೊನಾ ಜಾಗೃತಿಗಾಗಿ ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯು ಹೊಸ ರೂಪಾಂತರವು ಪ್ರತಿರಕ್ಷಣಾ ವ್ಯವಸ್ಥೆಗಳನ್ನು ತಪ್ಪಿಸುವಲ್ಲಿ ಉತ್ತಮವಾಗಿದೆ ಎಂಬುದನ್ನು ಸೂಚಿಸುತ್ತದೆ ”ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸದಸ್ಯರೊಬ್ಬರು ಹೇಳಿದ್ದಾರೆ.
ಸೋಂಕು ಏರಿಕೆ ಕುರಿತು ಭಯಭೀತರಾಗುವ ಅಗತ್ಯವಿಲ್ಲ. ಜನರು ಮಾಸ್ಕ್ ಧರಿಸುವುದು, ಜನದಟ್ಟಣೆ ಇರುವ ಪ್ರದೇಶದಿಂದ ದೂರ ಇರುವುದು ಹಾಗೂ ಕೋವಿಡ್ ಸೂಕ್ತ ನಡವಳಿಕೆಯ್ನು ಅನುಸರಿಸುವುದರಿಂದ ಸೋಂಕಿನಿಂದ ದೂರ ಉಳಿಯಬಹುದು. ಹೊಸ ವರ್ಷ ಸಂಭ್ರಮ ವೇಳೆ ಹೆಚ್ಚೆಚ್ಚು ಜನರು ಸೇರುವುದರಿಂದ ಇದಕ್ಕೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಆಕ್ಟೀವ್ ಕೇಸ್ಗಳ ಸಂಖ್ಯೆ 1,300 ಗಡಿ ದಾಟಿದೆ. ಒಂದು ಕಡೆ ಕೇರಳದಲ್ಲೂ ಪ್ರತಿನಿತ್ಯ 300ಕ್ಕೂ ಹೆಚ್ಚು ಕೇಸ್ಗಳು ದಾಖಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ