ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೂ ನಿಫಾ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಬ್ಬರ ರಕ್ತ ಮತ್ತು ಕಫದ ಮಾದರಿ ಸಂಗ್ರಹಿಸಲಾಗಿತ್ತು. ಎರಡೂ ಪ್ರಕರಣದಲ್ಲಿ ಋಣಾತ್ಮಕ ವರದಿ ಬಂದಿದೆ. ಜಿಲ್ಲೆಯಲ್ಲಿ ನಿಫಾ ಸೋಂಕು ಪತ್ತೆಯಾಗಿದೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿ’ ಎಂದರು.
ಒಬ್ಬ ಮಹಿಳೆ ಕೋಝಿಕ್ಕೋಡ್ ಜಿಲ್ಲೆಯ ವೈದ್ಯಕೀಯ ಕಾಲೇಜು ಒಂದರ ಉದ್ಯೋಗಿ. ಅವರು ಮಂಗಳೂರಿನಲ್ಲಿ ದಾಖಲಾಗಿದ್ದರು. ಅವರಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ಇತ್ತು. ಇನ್ನೊಂದು ಪ್ರಕರಣದಲ್ಲೂ ಮಣಿಪಾಲದ ಪ್ರಯೋಗಾಲಯಕ್ಕೆ ಮಾದರಿ ಕಳುಹಿಸಿ ಪರೀಕ್ಷೆ ನಡೆಸಲಾಗಿತ್ತು ಎಂದು ತಿಳಿಸಿದರು.
ಕೇರಳದಲ್ಲಿ ಖರ್ಜೂರ ಜಾತಿಗೆ ಸೇರಿದ ‘ತರಿ’ ಎಂಬ ಮರದಿಂದ ತೆಗೆದ ಸೇಂದಿ ಸೇವನೆಯಿಂದ ಸೋಂಕು ತಗುಲಿರುವ ಶಂಕೆ ಇದೆ. ಬಾವಲಿಗಳು ಇದಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೇಂದಿ ನಿರ್ಬಂಧಿಸುವ ಕುರಿತು ಚರ್ಚೆ ನಡೆದಿದೆ. ಶೀಘ್ರದಲ್ಲೇ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್