ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಸರಕು ಸಾಗಣೆ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಹಾಗೂ ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಶನಿವಾರ ಈ ಘಟನೆ ನಡೆದಿದ್ದು, ಯಾವುದೇ ಜೀವ ಹಾನಿ ವರದಿಯಾಗಿಲ್ಲ ಎಂದು ಸಮುದ್ರಯಾನ ಸಂಸ್ಥೆ ತಿಳಿಸಿದೆ. ಲಿಬೇರಿಯಾ ಧ್ವಜವುಳ್ಳ ಟ್ಯಾಂಕರ್, ಇಸ್ರೇಲ್ಗೆ ಸಂಬಂಧಿಸಿದ್ದಾಗಿದೆ ಎಂದು ಮತ್ತೊಂದು ಸಮುದ್ರಯಾನ ಸಂಸ್ಥೆ ಹೇಳಿದೆ.
ಭಾರತದ ಕರಾವಳಿ ಭಾಗದಲ್ಲಿ ನಡೆದ ಈ ದಾಳಿಯಿಂದ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಗೆ ಯಾವುದೇ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಲಿಬೇರಿಯಾ ಧ್ವಜ ಹೊತ್ತಿರುವ ಈ ರಾಸಾಯನಿಕ ಉತ್ಪನ್ನಗಳ ಟ್ಯಾಂಕರ್ ಇಸ್ರೇಲ್ ಜತೆ ನಂಟು ಹೊಂದಿದೆ ಎಂದು ಬ್ರಿಟಿಷ್ ಸೇನೆಯ ಯುನೈಟೆಡ್ ಕಿಂಗ್ಡಮ್ ಸಾಗರ ವ್ಯಾಪಾರ ಕಾರ್ಯಾಚರಣೆಗಳು ಮತ್ತು ಸಾಗರ ಭದ್ರತಾ ಸಂಸ್ಥೆ ಆಂಬ್ರೆ ಮಾಹಿತಿ ನೀಡಿದೆ.ಸಿಬ್ಬಂದಿರಹಿತ ವೈಮಾನಿಕ ವ್ಯವಸ್ಥೆಯಿಂದ ದಾಳಿ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಯುನೈಟೆಡ್ ಕಿಂಗ್ಡಮ್ ಮೆರಿಟೈಮ್ ಆಪರೇಷನ್ಸ್ ತಿಳಿಸಿದೆ.
ಹಡಗಿನಲ್ಲಿರುವ ಸಿಬ್ಬಂದಿಯಲ್ಲಿ 20 ಭಾರತೀಯರು ಕೂಡ ಸೇರಿದ್ದಾರೆ. ಗುಜರಾತ್ನ ಪೋರಬಂದರ್ ಕರಾವಳಿಯಿಂದ ಸುಮಾರು 217 ನಾಟಿಕಲ್ ಮೈಲು ದೂರದಲ್ಲಿರುವ ಎಂವಿ ಚೆಮ್ ಪ್ಲುಟೊ ವ್ಯಾಪಾರಿ ಹಡಗಿನ ಕಡೆಗೆ ಭಾರತೀಯ ಕರಾವಳಿ ಕಾವಲು ಹಡಗು ತೆರಳುತ್ತಿದೆ.
ಸೌದಿ ಅರೇಬಿಯಾದ ಬಂದರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಹಡಗು, ಕಚ್ಚಾ ತೈಲವನ್ನು ರವಾನಿಸುತ್ತಿತ್ತು. ಭಾರತದ ವಿಶೇಷ ಆರ್ಥಿಕ ವಲಯದಲ್ಲಿ ಪಹರೆ ನಡೆಸುತ್ತಿದ್ದ ಕರಾವಳಿ ಕಾವಲು ಹಡಗು ಐಸಿಜಿಎಸ್ ವಿಕ್ರಮ್, ಆಪತ್ತಿನಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ದೌಡಾಯಿಸಿದೆ. ಅದಕ್ಕೆ ಸಹಾಯ ಒದಗಿಸುವಂತೆ ಈ ಭಾಗದಲ್ಲಿನ ಎಲ್ಲಾ ಹಡುಗಳಿಗೂ ಕರಾವಳಿ ಕಾವಲು ಪಡೆ ವಿಭಾಗ ಸೂಚನೆ ನೀಡಿದೆ.
ಬೆಂಕಿಯನ್ನು ನಂದಿಸಲಾಗಿದೆ. ಆದರೆ ಅದು ಹಡಗಿನ ಕಾರ್ಯಾಚರಣೆಗೆ ತೊಡಕು ಉಂಟುಮಾಡಿದೆ. ಹಡಗಿನಲ್ಲಿರುವ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್