ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಸರಕು ಸಾಗಣೆ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಹಾಗೂ ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಶನಿವಾರ ಈ ಘಟನೆ ನಡೆದಿದ್ದು, ಯಾವುದೇ ಜೀವ ಹಾನಿ ವರದಿಯಾಗಿಲ್ಲ ಎಂದು ಸಮುದ್ರಯಾನ ಸಂಸ್ಥೆ ತಿಳಿಸಿದೆ. ಲಿಬೇರಿಯಾ ಧ್ವಜವುಳ್ಳ ಟ್ಯಾಂಕರ್, ಇಸ್ರೇಲ್ಗೆ ಸಂಬಂಧಿಸಿದ್ದಾಗಿದೆ ಎಂದು ಮತ್ತೊಂದು ಸಮುದ್ರಯಾನ ಸಂಸ್ಥೆ ಹೇಳಿದೆ.
ಭಾರತದ ಕರಾವಳಿ ಭಾಗದಲ್ಲಿ ನಡೆದ ಈ ದಾಳಿಯಿಂದ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಗೆ ಯಾವುದೇ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಲಿಬೇರಿಯಾ ಧ್ವಜ ಹೊತ್ತಿರುವ ಈ ರಾಸಾಯನಿಕ ಉತ್ಪನ್ನಗಳ ಟ್ಯಾಂಕರ್ ಇಸ್ರೇಲ್ ಜತೆ ನಂಟು ಹೊಂದಿದೆ ಎಂದು ಬ್ರಿಟಿಷ್ ಸೇನೆಯ ಯುನೈಟೆಡ್ ಕಿಂಗ್ಡಮ್ ಸಾಗರ ವ್ಯಾಪಾರ ಕಾರ್ಯಾಚರಣೆಗಳು ಮತ್ತು ಸಾಗರ ಭದ್ರತಾ ಸಂಸ್ಥೆ ಆಂಬ್ರೆ ಮಾಹಿತಿ ನೀಡಿದೆ.ಸಿಬ್ಬಂದಿರಹಿತ ವೈಮಾನಿಕ ವ್ಯವಸ್ಥೆಯಿಂದ ದಾಳಿ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಯುನೈಟೆಡ್ ಕಿಂಗ್ಡಮ್ ಮೆರಿಟೈಮ್ ಆಪರೇಷನ್ಸ್ ತಿಳಿಸಿದೆ.
ಹಡಗಿನಲ್ಲಿರುವ ಸಿಬ್ಬಂದಿಯಲ್ಲಿ 20 ಭಾರತೀಯರು ಕೂಡ ಸೇರಿದ್ದಾರೆ. ಗುಜರಾತ್ನ ಪೋರಬಂದರ್ ಕರಾವಳಿಯಿಂದ ಸುಮಾರು 217 ನಾಟಿಕಲ್ ಮೈಲು ದೂರದಲ್ಲಿರುವ ಎಂವಿ ಚೆಮ್ ಪ್ಲುಟೊ ವ್ಯಾಪಾರಿ ಹಡಗಿನ ಕಡೆಗೆ ಭಾರತೀಯ ಕರಾವಳಿ ಕಾವಲು ಹಡಗು ತೆರಳುತ್ತಿದೆ.
ಸೌದಿ ಅರೇಬಿಯಾದ ಬಂದರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಹಡಗು, ಕಚ್ಚಾ ತೈಲವನ್ನು ರವಾನಿಸುತ್ತಿತ್ತು. ಭಾರತದ ವಿಶೇಷ ಆರ್ಥಿಕ ವಲಯದಲ್ಲಿ ಪಹರೆ ನಡೆಸುತ್ತಿದ್ದ ಕರಾವಳಿ ಕಾವಲು ಹಡಗು ಐಸಿಜಿಎಸ್ ವಿಕ್ರಮ್, ಆಪತ್ತಿನಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ದೌಡಾಯಿಸಿದೆ. ಅದಕ್ಕೆ ಸಹಾಯ ಒದಗಿಸುವಂತೆ ಈ ಭಾಗದಲ್ಲಿನ ಎಲ್ಲಾ ಹಡುಗಳಿಗೂ ಕರಾವಳಿ ಕಾವಲು ಪಡೆ ವಿಭಾಗ ಸೂಚನೆ ನೀಡಿದೆ.
ಬೆಂಕಿಯನ್ನು ನಂದಿಸಲಾಗಿದೆ. ಆದರೆ ಅದು ಹಡಗಿನ ಕಾರ್ಯಾಚರಣೆಗೆ ತೊಡಕು ಉಂಟುಮಾಡಿದೆ. ಹಡಗಿನಲ್ಲಿರುವ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ