
ಮಂಗಳೂರು: ಕೊಳಕು ನಾಲಗೆಯಿಂದ, ಹೊಲಸು ನುಡಿಗಳನ್ನು ಹರಿಯಬಿಟ್ಟು ರಾಜ್ಯದ ಶಾಂತಿಯುತ ವಾತಾವರಣವನ್ನು ಕೆಡಿಸುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಬಂಧಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ವಿರುದ್ಧ ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
“ಮುಖ್ಯಮಂತ್ರಿಗಳೇ.. ಕಲ್ಲಡ್ಕ ಪ್ರಭಾಕರ ಭಟ್ ಗೆ ಈ ನೆಲದ ಯಾವ ಕಾನೂನೂ ಅನ್ವಯಿಸುವುದಿಲ್ಲವೇ?” ಎಂಬ ಸಂದೇಹವನ್ನು ಮುಂದಿಟ್ಟು ರಾಜ್ಯದಲ್ಲಿ ನೆಮ್ಮದಿಯ ವಾತಾವರಣ ಸೃಷ್ಟಿಗಾಗಿ ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ, ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಸಂಘಟನೆಗಳ ನೇತೃತ್ವದಲ್ಲಿ ಡಿ.29 ರಂದು ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅಪರಾಹ್ನ 3 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ರವಿವಾರ ಮಂಡ್ಯದಲ್ಲಿ ನೀಡಿರುವ ಅತ್ಯಂತ ಅವಹೇಳನಕಾರಿ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಜಾಮೀನು ರಹಿತ ಸೆಕ್ಷನ್ ಗಳಡಿಯಲ್ಲಿ ಪ್ರಕರಣಗಳು ಕೂಡ ದಾಖಲಾಗಿದೆ.ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದು ರಾಜ್ಯದ ಜನತೆಯ ಆತಂಕಕ್ಕೆ ಕಾರಣವಾಗಿದೆ.
ಪ್ರಭಾಕರ ಭಟ್, ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ. ಪ್ರಭಾಕರ ಭಟ್ ವಿರುದ್ಧ ರೌಡಿಶೀಟ್ ತೆರೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗಿದೆ.
ಕಳೆದ ರವಿವಾರ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, “ಹಿಂದೆ ತಲಾಕ್ ತಲಾಕ್ ಎಂದು ಹೇಳಿ ತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ” ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದು, ಇನ್ನೂ ಅನೇಕ ಪ್ರಚೋದನಕಾರಿ ಮಾತುಗಳನ್ನು ಅದೇ ಭಾಷಣದಲ್ಲಿ ಪ್ರಭಾಕರ್ ಭಟ್ ಹೇಳಿದ್ದ. ಈ ಬಗ್ಗೆ ರಾಜ್ಯಾದ್ಯಂತ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.


















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ