ನವದೆಹಲಿ:ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ತಮಗೆ ನೀಡಿದ ಸ್ಯಾಂಡ್ವಿಚ್ನಲ್ಲಿ ಜೀವಂತ ಹುಳು ಹರಿದಾಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಕುಶ್ಬೂ ಗುಪ್ತಾ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಸ್ಯಾಂಡ್ವಿಚ್ನಲ್ಲಿ ಜೀವಂತ ಹುಳು ಹರಿದಾಡುವ ಫೋಟೋ ಕೂಡ ಶೇರ್ ಮಾಡಿದ್ದಾರೆ.
ಇದು ಜನಾಕ್ರೋಶಕ್ಕೆ ಗುರಿಯಾಗಿದೆ. ಕುಶ್ಬೂ ಗುಪ್ತಾ ಅವರು ಈ ಘಟನೆಯನ್ನು ವಿಮಾನಯಾನ ಸಂಸ್ಥೆಗೆ ಟ್ಯಾಗ್ ಮಾಡುವ ಮೂಲಕ ವಿವರಿಸಿದ್ದಾರೆ. ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಕುಶ್ಬೂ ಅವರಿಗೆ ಸಸ್ಯಾಹಾರಿ ಸ್ಯಾಂಡ್ವಿಚ್ ನೀಡಲಾಯಿತು.
ಅವರು ವಿಮಾನ ಟಿಕೆಟ್ನೊಂದಿಗೆ ಊಟವನ್ನು ಮೊದಲೇ ಕಾಯ್ದಿರಿಸಿದ್ದರು. ಸ್ಯಾಂಡ್ವಿಚ್ ಅನ್ನು ತಿನ್ನುವಾಗ ಕುಶ್ಬೂ ಗುಪ್ತಾ ಅವರಿಗೆ ಅದರಲ್ಲಿ ಏನೋ ಹರಿದಾಡುವುದು ಕಾಣಿಸಿದೆ. ಅದನ್ನು ಹತ್ತಿರದಿಂದ ನೋಡಿದಾಗ ಅವರು ಅಕ್ಷರಶ: ಬೆಚ್ಚಿಬಿದ್ದಿದ್ದಾರೆ. ಅದರಲ್ಲಿ ಜೀವಂತ ಹುಳವೊಂದು ಹರಿದಾಡುತ್ತಿರುವುದನ್ನು ಕುಶ್ಬೂ ಗುಪ್ತಾ ಅವರು ಗಮನಿಸಿದ್ದಾರೆ.
ತಕ್ಷಣ ಅವರು ಗಗನ ಸಖಿಗೆ ಅದನ್ನು ತೋರಿಸಿದ್ದಾರೆ. ಈ ವೇಳೆ ವಿಮಾನ ಸಿಬ್ಬಂದಿ ಕುಶ್ಬೂ ಗುಪ್ತಾ ಅವರ ಬಳಿ ಕ್ಷಮೆ ಯಾಚಿಸಿದ್ದಾರೆ ಎನ್ನಲಾಗಿದೆ. ಕುಶ್ಬೂ ಗುಪ್ತಾ ಅವರು ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಇಂಡಿಗೋ ವಿಮಾನದಲ್ಲಿ ತನ್ನ ಸಂಕಷ್ಟದ ಅನುಭವವನ್ನು ಅವರು ವಿವರಿಸಿದ್ದಾರೆ. ಆಹಾರದ ಗುಣಮಟ್ಟ ಮತ್ತು ಸೇವಾ ಗುಣಮಟ್ಟದಲ್ಲಿನ ಕುಸಿತಕ್ಕಾಗಿ ವಿಮಾನಯಾನ ಸಂಸ್ಥೆಯನ್ನು ದೂಷಿಸಿದ್ದಾರೆ. ಇದರ ವಿರುದ್ಧ ಸೂಕ್ತ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ.
ಇಂಡಿಗೋ ಪ್ರತಿಕ್ರಿಯೆ ಏನು?
ಕುಶ್ಬೂ ಗುಪ್ತಾ ಅವರ ಸಂದೇಶಕ್ಕೆ ಇಂಡಿಗೋ ಪ್ರತಿಕ್ರಿಯೆ ನೀಡಿದೆ. ಇಂಡಿಗೋ ಪ್ರಯಾಣಿಕರಾದ ಗುಪ್ತಾಗೆ ಕ್ಷಮೆಯಾಚಿಸಿದೆ ಮತ್ತು ವಿಷಯವು ಪ್ರಸ್ತುತ ತನಿಖೆಯಲ್ಲಿದೆ ಎಂದು ಹೇಳಿದೆ. “ನಮ್ಮ ಗ್ರಾಹಕರಲ್ಲಿ ಒಬ್ಬರು ದೆಹಲಿಯಿಂದ ಮುಂಬೈಗೆ 6E 6107 ವಿಮಾನದಲ್ಲಿ ತಮ್ಮ ಅನುಭವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ನಮಗೆ ತಿಳಿದಿದೆ. ವಿಮಾನದಲ್ಲಿ ಆಹಾರ ಮತ್ತು ಪಾನೀಯ ಸೇವೆಯ ಉನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿರುತ್ತೇವೆ. ತನಿಖೆಯ ನಂತರ, ನಮ್ಮ ಸಿಬ್ಬಂದಿ ಸ್ಯಾಂಡ್ವಿಚ್ನ ಸೇವೆಯನ್ನು ತಕ್ಷಣವೇ ನಿಲ್ಲಿಸಿದೆ, “ಎಂದಿದೆ.
“ಪ್ರಸ್ತುತ ವಿಷಯವು ಸಂಪೂರ್ಣ ಪರೀಕ್ಷೆಯಲ್ಲಿದೆ. ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ನಮ್ಮ ಅಡುಗೆದಾರರೊಂದಿಗೆ ಮಾತನಾಡಿದ್ದೇವೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ” ಎಂದು ಅದು ಹೇಳಿದೆ
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್