ಕೋಝಿಕ್ಕೋಡ್: ವಿವಾದಾತ್ಮಕ ಹೇಳಿಕೆಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಸಮಸ್ತ ಜಂಟಿ ಕಾರ್ಯದರ್ಶಿ ಉಮರ್ ಫೈಝಿ ಮುಕ್ಕಂ ಪ್ರತಿಕ್ರಿಯಿಸಿದ್ದಾರೆ. ತಲೆಗೆ ಶಾಲು ಹಾಕದ ಮಹಿಳೆಯರೆಲ್ಲರೂ ಸ್ವಚ್ಛಂದವಾಗಿ ವರ್ತಿಸುತ್ತಾರೆ ಎಂದು ಹೇಳಿಲ್ಲ ಎಂದು ಉಮರ್ ಫೈಝಿ ಮುಕ್ಕಂ ಹೇಳಿದರು.
ಈ ಹಿಂದೆ ಪೊಲೀಸ್ ಠಾಣೆಯಿಂದ ಕರೆ ಮಾಡಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನಂತರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದೂ ತಿಳಿಸಲಾಗಿತ್ತು. ಎರಡು ತಿಂಗಳ ಬಳಿಕ ಈಗ ಯಾಕೆ ಕೇಸ್ ತೆಗೆದುಕೊಂಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಉಮರ್ ಫೈಝಿ ಮುಕ್ಕಂ ಹೇಳಿದರು.
ಇದೀಗ ಉಮರ್ ಫೈಝಿ ವಿರುದ್ಧ ಪ್ರಕರಣ ದಾಖಲಾಗಿದೆ. ‘ನಿಸಾ’ ಅಧ್ಯಕ್ಷೆ ಹಾಗೂ ಸಮಾಜ ಸೇವಕಿ ವಿ.ಪಿ.ಝೊಹರಾ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉಮರ್ ಫೈಝಿ ಅವರು ಮುಸ್ಲಿಂ ಮಹಿಳೆಯರು ತಲೆಗೆ ಶಾಲು ಹಾಕದೆ ಸ್ವಚ್ಛಂದವಾಗಿ ವರ್ತಿಸಲು ಸಮ್ಮತಿಸಲಾದು ಎಂಬ ಮಾತು ಬಹಳ ವಿವಾದಕ್ಕೀಡಾಗಿತ್ತು. ಈ ಹೇಳಿಕೆ ವಿರುದ್ಧ ಝೊಹರಾ ಪೊಲೀಸ್ ದೂರು ದಾಖಲಿಸಿದ್ದಾರೆ. ಉಮರ್ ಫೈಝಿ ವಿರುದ್ಧ ಕೋಝಿಕ್ಕೋಡ್ ನಡಕಾವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಮರ್ ಫೈಝಿ ಧಾರ್ಮಿಕ ಘರ್ಷಣೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಐಪಿಸಿ 295ಎ ಮತ್ತು 298 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಅಕ್ಟೋಬರ್ನಲ್ಲಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹೇಳಿಕೆ ವಿರುದ್ಧ ಭಾರೀ ಪ್ರತಿಭಟನೆ ನಡೆದಿದೆ. ಕುಟುಂಬಶ್ರೀಯ ‘ಬ್ಯಾಕ್ ಟು ಸ್ಕೂಲ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಝೊಹರಾ ಶಾಲು ತೆಗೆದು ಪ್ರತಿಭಟನೆ ನಡೆಸಿದ್ದು ಕೂಡ ಭಾರೀ ಸುದ್ದಿಯಾಗಿತ್ತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್