ಕೋಝಿಕ್ಕೋಡ್: ವಿವಾದಾತ್ಮಕ ಹೇಳಿಕೆಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಸಮಸ್ತ ಜಂಟಿ ಕಾರ್ಯದರ್ಶಿ ಉಮರ್ ಫೈಝಿ ಮುಕ್ಕಂ ಪ್ರತಿಕ್ರಿಯಿಸಿದ್ದಾರೆ. ತಲೆಗೆ ಶಾಲು ಹಾಕದ ಮಹಿಳೆಯರೆಲ್ಲರೂ ಸ್ವಚ್ಛಂದವಾಗಿ ವರ್ತಿಸುತ್ತಾರೆ ಎಂದು ಹೇಳಿಲ್ಲ ಎಂದು ಉಮರ್ ಫೈಝಿ ಮುಕ್ಕಂ ಹೇಳಿದರು.
ಈ ಹಿಂದೆ ಪೊಲೀಸ್ ಠಾಣೆಯಿಂದ ಕರೆ ಮಾಡಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನಂತರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದೂ ತಿಳಿಸಲಾಗಿತ್ತು. ಎರಡು ತಿಂಗಳ ಬಳಿಕ ಈಗ ಯಾಕೆ ಕೇಸ್ ತೆಗೆದುಕೊಂಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಉಮರ್ ಫೈಝಿ ಮುಕ್ಕಂ ಹೇಳಿದರು.
ಇದೀಗ ಉಮರ್ ಫೈಝಿ ವಿರುದ್ಧ ಪ್ರಕರಣ ದಾಖಲಾಗಿದೆ. ‘ನಿಸಾ’ ಅಧ್ಯಕ್ಷೆ ಹಾಗೂ ಸಮಾಜ ಸೇವಕಿ ವಿ.ಪಿ.ಝೊಹರಾ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉಮರ್ ಫೈಝಿ ಅವರು ಮುಸ್ಲಿಂ ಮಹಿಳೆಯರು ತಲೆಗೆ ಶಾಲು ಹಾಕದೆ ಸ್ವಚ್ಛಂದವಾಗಿ ವರ್ತಿಸಲು ಸಮ್ಮತಿಸಲಾದು ಎಂಬ ಮಾತು ಬಹಳ ವಿವಾದಕ್ಕೀಡಾಗಿತ್ತು. ಈ ಹೇಳಿಕೆ ವಿರುದ್ಧ ಝೊಹರಾ ಪೊಲೀಸ್ ದೂರು ದಾಖಲಿಸಿದ್ದಾರೆ. ಉಮರ್ ಫೈಝಿ ವಿರುದ್ಧ ಕೋಝಿಕ್ಕೋಡ್ ನಡಕಾವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಮರ್ ಫೈಝಿ ಧಾರ್ಮಿಕ ಘರ್ಷಣೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಐಪಿಸಿ 295ಎ ಮತ್ತು 298 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಅಕ್ಟೋಬರ್ನಲ್ಲಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹೇಳಿಕೆ ವಿರುದ್ಧ ಭಾರೀ ಪ್ರತಿಭಟನೆ ನಡೆದಿದೆ. ಕುಟುಂಬಶ್ರೀಯ ‘ಬ್ಯಾಕ್ ಟು ಸ್ಕೂಲ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಝೊಹರಾ ಶಾಲು ತೆಗೆದು ಪ್ರತಿಭಟನೆ ನಡೆಸಿದ್ದು ಕೂಡ ಭಾರೀ ಸುದ್ದಿಯಾಗಿತ್ತು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ