ಬೆಂಗಳೂರು :ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.
“ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಮವಾದ ಸೂಚನೆಗಳನ್ನು ಎಲ್ಲಾ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು.
“ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21 ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.
ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದ್ದು, ಅಂದು ಸಂಜೆ 4 ಗಂಟೆಗೆ ವಿಸ್ತೃತ ವಾದ ನಡೆಯಲಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, “ಹಿಂದೆ ತಲಾಕ್ ತಲಾಕ್ ಎಂದು ಹೇಳಿ ತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ” ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ