ಕುವೈತ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಇದರ 30ನೇ ವಾರ್ಷಿಕೋತ್ಸವದ ಪ್ರಚಾರಾರ್ಥವಾಗಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ ಸಮಾರಂಭವು ಜನವರಿ 8ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಪ್ರಮುಖ ಅಥಿತಿಗಳಾಗಿ ಮದನಿಯಂ ಲತೀಫ್ ಸಖಾಫಿ ಉಸ್ತಾದ್ ಮತ್ತು ಅಲ್ ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಯ್ಯಿದ್ ಮಂಕಫ್ ತಂಙಳ್ ದುಆ ನೇತೃತ್ವ ವಹಿಸಿದರು. ಅಲ್ ಮದೀನಾ ಮಂಜನಾಡಿ ಕುವೈತ್ ಇದರ ಸೆಕ್ರೆಟರಿಯಾದ ಜನಾಬ್ ಮೂಸಾ ಇಬ್ರಾಹೀಂ ಸ್ವಾಗತಿಸಿದರು.ಕಾರ್ಯಕ್ರಮದ ಉದ್ಘಾಟನೆಯನ್ನು KCF ಕುವೈತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು. ಹುಸೈನ್ ಎರ್ಮಾಡ್ ಉಸ್ತಾದ್ ಅವರು ನೆರವೇರಿಸಿದರು.
ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಚೆಯರ್ಮೆನ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಸಂದೇಶ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಶರಫುಲ್ ಉಲಮಾ ಮತ್ತು ಸಂಸ್ಥೆಯ ಕುರಿತು ವಿವರಿಸಿದರು. ಶರಫುಲ್ ಉಲಮಾ(ಖ.ಸಿ) ಉಸ್ತಾದರ ಕುರಿತ ಶಾಫಿ ಜೋಕಟ್ಟೆ ಅವರ ಹಾಡು ಮನಮೋಹಕವಾಗಿತ್ತು.
ಬಳಿಕ ಅಲ್ ನಂತರ ಅಲ್ ಮದೀನಾ ಕುವೈತ್ ಕಮಿಟಿ ಇದರ ಅಧ್ಯಕ್ಷರಾದ ಶಾಹುಲ್ ಹಮೀದ್ ಸಅದಿ ಉಸ್ತಾದರು ಅಧ್ಯಕ್ಷೀಯ ಭಾಷಣ ನಡೆಸಿದರು. ನಂತರ ಅಬ್ದುಲ್ ಲತೀಫ್ ಸಖಾಫಿ ಮದನಿಯಂ ಉಸ್ತಾದರು ಮುಖ್ಯ ಪ್ರಭಾಷಣ ಮತ್ತು ಭಕ್ತಿಪೂರ್ಣ ದುಆ ನಡೆಸಿಕೊಟ್ಟರು.
ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿತ್ವಗಳನ್ನು ಪ್ರತ್ಯೇಕವಾಗಿ ಗೌರವಿಸಲಾಯಿತು. ಕೊನೆಯದಾಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಸಿಎಫ್, ಕಿಸ್ವಾ Dksc ಬಾಯರ್ Kkma ಎಲ್ಲಾ ಕಮಿಟಿ ನಾಯಕರಿಗೆ ಎಲ್ಲರಿಗೂ ಕನ್ವೀನರ್ ಹಸೈನಾರ್ ಮೊಂಟೆಪದವು ಅವರು ಧನ್ಯವಾದಗಳು ಅರ್ಪಿಸಿದರು.ನಂತರ ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.





















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?