ಕುವೈತ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಇದರ 30ನೇ ವಾರ್ಷಿಕೋತ್ಸವದ ಪ್ರಚಾರಾರ್ಥವಾಗಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ ಸಮಾರಂಭವು ಜನವರಿ 8ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಪ್ರಮುಖ ಅಥಿತಿಗಳಾಗಿ ಮದನಿಯಂ ಲತೀಫ್ ಸಖಾಫಿ ಉಸ್ತಾದ್ ಮತ್ತು ಅಲ್ ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಯ್ಯಿದ್ ಮಂಕಫ್ ತಂಙಳ್ ದುಆ ನೇತೃತ್ವ ವಹಿಸಿದರು. ಅಲ್ ಮದೀನಾ ಮಂಜನಾಡಿ ಕುವೈತ್ ಇದರ ಸೆಕ್ರೆಟರಿಯಾದ ಜನಾಬ್ ಮೂಸಾ ಇಬ್ರಾಹೀಂ ಸ್ವಾಗತಿಸಿದರು.ಕಾರ್ಯಕ್ರಮದ ಉದ್ಘಾಟನೆಯನ್ನು KCF ಕುವೈತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು. ಹುಸೈನ್ ಎರ್ಮಾಡ್ ಉಸ್ತಾದ್ ಅವರು ನೆರವೇರಿಸಿದರು.
ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಚೆಯರ್ಮೆನ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಸಂದೇಶ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಶರಫುಲ್ ಉಲಮಾ ಮತ್ತು ಸಂಸ್ಥೆಯ ಕುರಿತು ವಿವರಿಸಿದರು. ಶರಫುಲ್ ಉಲಮಾ(ಖ.ಸಿ) ಉಸ್ತಾದರ ಕುರಿತ ಶಾಫಿ ಜೋಕಟ್ಟೆ ಅವರ ಹಾಡು ಮನಮೋಹಕವಾಗಿತ್ತು.
ಬಳಿಕ ಅಲ್ ನಂತರ ಅಲ್ ಮದೀನಾ ಕುವೈತ್ ಕಮಿಟಿ ಇದರ ಅಧ್ಯಕ್ಷರಾದ ಶಾಹುಲ್ ಹಮೀದ್ ಸಅದಿ ಉಸ್ತಾದರು ಅಧ್ಯಕ್ಷೀಯ ಭಾಷಣ ನಡೆಸಿದರು. ನಂತರ ಅಬ್ದುಲ್ ಲತೀಫ್ ಸಖಾಫಿ ಮದನಿಯಂ ಉಸ್ತಾದರು ಮುಖ್ಯ ಪ್ರಭಾಷಣ ಮತ್ತು ಭಕ್ತಿಪೂರ್ಣ ದುಆ ನಡೆಸಿಕೊಟ್ಟರು.
ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿತ್ವಗಳನ್ನು ಪ್ರತ್ಯೇಕವಾಗಿ ಗೌರವಿಸಲಾಯಿತು. ಕೊನೆಯದಾಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಸಿಎಫ್, ಕಿಸ್ವಾ Dksc ಬಾಯರ್ Kkma ಎಲ್ಲಾ ಕಮಿಟಿ ನಾಯಕರಿಗೆ ಎಲ್ಲರಿಗೂ ಕನ್ವೀನರ್ ಹಸೈನಾರ್ ಮೊಂಟೆಪದವು ಅವರು ಧನ್ಯವಾದಗಳು ಅರ್ಪಿಸಿದರು.ನಂತರ ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.





















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ