ಕುವೈತ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಇದರ 30ನೇ ವಾರ್ಷಿಕೋತ್ಸವದ ಪ್ರಚಾರಾರ್ಥವಾಗಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ ಸಮಾರಂಭವು ಜನವರಿ 8ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಪ್ರಮುಖ ಅಥಿತಿಗಳಾಗಿ ಮದನಿಯಂ ಲತೀಫ್ ಸಖಾಫಿ ಉಸ್ತಾದ್ ಮತ್ತು ಅಲ್ ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಯ್ಯಿದ್ ಮಂಕಫ್ ತಂಙಳ್ ದುಆ ನೇತೃತ್ವ ವಹಿಸಿದರು. ಅಲ್ ಮದೀನಾ ಮಂಜನಾಡಿ ಕುವೈತ್ ಇದರ ಸೆಕ್ರೆಟರಿಯಾದ ಜನಾಬ್ ಮೂಸಾ ಇಬ್ರಾಹೀಂ ಸ್ವಾಗತಿಸಿದರು.ಕಾರ್ಯಕ್ರಮದ ಉದ್ಘಾಟನೆಯನ್ನು KCF ಕುವೈತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು. ಹುಸೈನ್ ಎರ್ಮಾಡ್ ಉಸ್ತಾದ್ ಅವರು ನೆರವೇರಿಸಿದರು.
ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಚೆಯರ್ಮೆನ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಸಂದೇಶ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಶರಫುಲ್ ಉಲಮಾ ಮತ್ತು ಸಂಸ್ಥೆಯ ಕುರಿತು ವಿವರಿಸಿದರು. ಶರಫುಲ್ ಉಲಮಾ(ಖ.ಸಿ) ಉಸ್ತಾದರ ಕುರಿತ ಶಾಫಿ ಜೋಕಟ್ಟೆ ಅವರ ಹಾಡು ಮನಮೋಹಕವಾಗಿತ್ತು.
ಬಳಿಕ ಅಲ್ ನಂತರ ಅಲ್ ಮದೀನಾ ಕುವೈತ್ ಕಮಿಟಿ ಇದರ ಅಧ್ಯಕ್ಷರಾದ ಶಾಹುಲ್ ಹಮೀದ್ ಸಅದಿ ಉಸ್ತಾದರು ಅಧ್ಯಕ್ಷೀಯ ಭಾಷಣ ನಡೆಸಿದರು. ನಂತರ ಅಬ್ದುಲ್ ಲತೀಫ್ ಸಖಾಫಿ ಮದನಿಯಂ ಉಸ್ತಾದರು ಮುಖ್ಯ ಪ್ರಭಾಷಣ ಮತ್ತು ಭಕ್ತಿಪೂರ್ಣ ದುಆ ನಡೆಸಿಕೊಟ್ಟರು.
ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿತ್ವಗಳನ್ನು ಪ್ರತ್ಯೇಕವಾಗಿ ಗೌರವಿಸಲಾಯಿತು. ಕೊನೆಯದಾಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಸಿಎಫ್, ಕಿಸ್ವಾ Dksc ಬಾಯರ್ Kkma ಎಲ್ಲಾ ಕಮಿಟಿ ನಾಯಕರಿಗೆ ಎಲ್ಲರಿಗೂ ಕನ್ವೀನರ್ ಹಸೈನಾರ್ ಮೊಂಟೆಪದವು ಅವರು ಧನ್ಯವಾದಗಳು ಅರ್ಪಿಸಿದರು.ನಂತರ ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.





















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್