ಮಂಗಳೂರು: ಅನಿವಾಸಿ ಕನ್ನಡಿಗರ ಬಹು ನಿರೀಕ್ಷಿತ ಬೇಡಿಕೆಯೊಂದು ಈಡೇರುತ್ತಿದೆ. ಮಂಗಳೂರು ಮತ್ತು ಸೌದಿ ಅರೇಬಿಯಾದ ಜಿದ್ದಾ ನಡುವೆ ನೇರ ವಿಮಾನಯಾನವು ಆರಂಭಗೊಳ್ಳಲಿದೆ.
ಮುಂದಿನ ಏಪ್ರಿಲ್ ತಿಂಗಳ 3 ರಿಂದ ವಿಮಾನ ಸೇವೆಯ ಆರಂಭಗೊಳ್ಳುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವೆಬ್ಸೈಟ್ ಮೂಲಕ ತಿಳಿದು ಬಂದಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ನಲ್ಲಿ ಜಿದ್ದಾ ಮತ್ತು ಮಂಗಳೂರು ನಡುವಿನ ಬುಕಿಂಗ್ ಆರಂಭಗೊಂಡಿದ್ದು,ಏಪ್ರಿಲ್ ತಿಂಗಳಿನಿಂದ ಪ್ರತಿ ಬುಧವಾರ ಜಿದ್ದಾದಿಂದಲೂ, ಅದೇ ದಿನ ಮಂಗಳೂರಿನಿಂದಲೂ ವಿಮಾನ ಲಭ್ಯವಿದೆ.
ಮಂಗಳೂರಿನಿಂದ ಮಧ್ಯಾಹ್ನ 2-50 ಕ್ಕೆ ಹೊರಟು ಸೌದಿ ಸಮಯ ಸಾಯಂಕಾಲ 6-25 ಕ್ಕೆ ಜಿದ್ದಾ ತಲುಪಲಿದೆ. ಜಿದ್ದಾದಿಂದ ರಾತ್ರಿ 7-25 ಕ್ಕೆ ಹೊರಟು ಮುಂಜಾನೆ 3.40 ಕ್ಕೆ ಮಂಗಳೂರು ತಲುಪಲಿದೆ.

ಉಮ್ರಾ ಹಾಗೂ ಇತರ ಯಾತ್ರಿಕರ ಅನುಕೂಲಕ್ಕಾಗಿ ಮಂಗಳೂರಿನಿಂದ ಜಿದ್ದಾ ಅಥವಾ ಮದೀನಾಕ್ಕೆ ನೇರ ವಿಮಾನ ಯಾನದ ವ್ಯವಸ್ಥೆ ಕಲ್ಪಿಸುವಂತೆ ಹಜ್ ಮತ್ತು ಉಮ್ರಾ ಟೂರ್ ಏಜೆನ್ಸಿಗಳು ಸೇರಿದಂತೆ ವಲಸಿಗ ಕನ್ನಡಿಗರು ಹಾಗೂ ನೆರೆರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯ ಪ್ರಯಾಣಿಕರ ಬೇಡಿಕೆಯಾಗಿತ್ತು.
ಕಳೆದ ವರ್ಷ ಮಾರ್ಚ್ನಲ್ಲಿ ಮಂಗಳೂರು-ಜಿದ್ದಾ ಮಧ್ಯೆ ನೇರ ವಿಮಾನಯಾನ ಆರಂಭಿಸುವುದಾಗಿ ಏರ್ ಇಂಡಿಯಾದ ಎಕ್ಸ್ಪ್ರೆಸ್ ಹೇಳಿತ್ತು.ಆದರೆ, ಕಾರಣಾಂತರಗಳಿಂದ ಸೇವೆ ಪ್ರಾರಂಭವು ವಿಳಂಬಗೊಂಡಿತ್ತು. ಇದೀಗ ವೆಬ್ಸೈಟ್ನಲ್ಲಿ ಬುಕಿಂಗ್ ಆರಂಭಗೊಡಿದ್ದು,ಬಹು ನಿರೀಕ್ಷಿತ ಬೇಡಿಕೆಯೊಂದು ಈಡೇರಿದಂತಾಗಿದೆ.
ಇಲ್ಲಿಂದ ಉಮ್ರಾ ನಿರ್ವಹಿಸಲು ಬೆಂಗಳೂರು, ಕೋಝಿಕ್ಕೋಡ್ ಅಥವಾ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅವಲಂಬಿಸಬೇಕಿತ್ತು. ಇದಲ್ಲದೆ ಅನಿವಾಸಿ ಭಾರತೀಯ ಉದ್ಯಮಿಗಳು, ಸೌದಿಯಲ್ಲಿರುವ ಉದ್ಯೋಗಸ್ಥರು ಹಾಗೂ ಇತರ ಪ್ರಯಾಣಿಕರಿಗೆ ಮಂಗಳೂರು ಜಿದ್ದಾ ನೇರ ಬಹಳ ಪ್ರಯೋಜನಕಾರಿ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್