ನವದೆಹಲಿ: ಇದೇ ತಿಂಗಳ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಕಾರ್ಯಕ್ರಮಕ್ಕೆ ಆಹ್ವಾನ ಪಡೆದಿರುವ ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ. ಈ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸುತ್ತೇನೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಅವರನ್ನು ಆಹ್ವಾನಿಸಲಾಗಿದೆ. ಆದರೆ ಅವರು ಭಾಗವಹಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಮೊದಲ ಹಂತದಲ್ಲಿ ಪಾಲ್ಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು ಆದರೆ ‘ಇಂಡಿಯಾ’ ಒಕ್ಕೂಟದ ಒತ್ತಡದಿಂದಾಗಿ ಬಿಕ್ಕಟ್ಟಿಗೆ ಸಿಲುಕಿತ್ತು. ಇದಾದ ಬಳಿಕ ಕಾಂಗ್ರೆಸ್ ನಾಯಕರು ಭಾಗವಹಿಸುವುದಿಲ್ಲ ಎಂದು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುವ ಸಮಾರಂಭವು ಬಿಜೆಪಿ ಮತ್ತು ಆರ್ಎಸ್ಎಸ್ನ ಕಾರ್ಯಕ್ರಮವಾಗಿದೆ. ಧರ್ಮವು ವೈಯಕ್ತಿಕ ವಿಷಯವಾಗಿದೆ. ಆರ್ಎಸ್ಎಸ್ ಮತ್ತು ಬಿಜೆಪಿ ಅಯೋಧ್ಯೆಯನ್ನು ರಾಜಕೀಯ ಯೋಜನೆಯನ್ನಾಗಿ ಮಾಡಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಬಿಜೆಪಿ, ಆರೆಸ್ಸೆಸ್ ನಾಯಕರು ಅಯೋಧ್ಯೆಯಲ್ಲಿ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಯೋಧ್ಯೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿ ಮತ್ತು ರಾಮ ಭಕ್ತರ ಭಾವನೆಗಳನ್ನು ಗೌರವಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್