ಮಂಗಳೂರು: ಮಂಜೇಶ್ವರ ಕಡಪ್ಪುರಂ ನಿವಾಸಿ ಖಾದರ್ (ಕಾಯಿಂಚ) ಎಂಬವರು ಇಂದು ಬೆಳಿಗ್ಗೆ ಮಂಗಳೂರಿನ ತಾರಾ ಕ್ಲಿನಿಕ್ ನಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯ ಗೋದಾಮೊಂದರಲ್ಲಿ ಇರಿಸಿ ಅವಮಾನಿಸಲಾಗಿದೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ಕಾರಣ ಕಳೆದ ಒಂದು ವಾರದಿಂದ ಮಂಗಳೂರಿನ ತಾರಾ ಕ್ಲಿನಿಕ್ ನಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಯಿಞ್ಞಿ ಎಂಬವರು ನೆರೆ ರಾಜ್ಯ ಕೇರಳದ ಗಡಿನಾಡು ಮಂಜೇಶ್ವರ ಕಡಪ್ಪುರಂ ನಿವಾಸಿಯಾಗಿದ್ದಾರೆ.
ಮೃತ ಶರೀರವನ್ನು ಅವಮಾನಿಸಿದ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ವಿಚಾರಿಸಿದಾಗ “ಇಲ್ಲಿ ಇಷ್ಟೇ ಸೌಕರ್ಯ ಇರುವುದು, ಬೇಕಾದರೆ ಕೊಂಡೊಯ್ಯಿರಿ” ಎಂಬ ಉಡಾಫೆಯ ಉತ್ತರವನ್ನು ನೀಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಇಂತಹಾ ಅಮಾನವೀಯ ಕೃತ್ಯ ನಡೆದಿರುವುದಕ್ಕೆ ಕನ್ನಡಿಗರು ತಲೆತಗ್ಗಿಸುವಂತಾಗಿದೆ.
ಕೇರಳದ ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮುಂತಾದ ಜಿಲ್ಲೆಗಳ ಬಹುತೇಕ ಮಂದಿ ಕರ್ನಾಟಕದ ಮಂಗಳೂರಿನ ವಿವಿಧ ಆಸ್ಪತ್ರೆಗಳನ್ನು ಆಶ್ರಯಿಸುತ್ತಿದ್ದಾರೆ. ಮಂಗಳೂರಿನ ಕೆಲವು ಆಸ್ಪತ್ರೆಗಳು ಕೇವಲ ವ್ಯಾಪಾರಕ್ಕೆ ಮಾತ್ರ ಸೀಮಿತಗೊಂಡು ಕಾರ್ಯಾಚರಿಸುತ್ತಿರುವುದು ನಿಜಕ್ಕೂ ಖಂಡನೀಯ. ಈ ಬಗ್ಗೆ ಸಂಬಂಧಪಟ್ಟ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್