ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇಪ್ಪತ್ತ ಮೂರು ಯಶಸ್ವೀ ವರ್ಷಗಳನ್ನು ಪೂರ್ತಿಮಾಡಿ ಇಪ್ಪತ್ತನಾಲ್ಕನೇ ವರ್ಷಕ್ಕೆ ಕಾಲಿಡುವಾಗ ಸಿಲ್ವರಿಯಂ ಎಂಬ ಹೆಸರಲ್ಲಿ
ಎರಡು ವರ್ಷಗಳ ಕಾಲ ಬೆಳ್ಳಿ ಹಬ್ಬ ಆಚರಿಸಲು ನಿರ್ಧರಿಸಲಾಗಿದ್ದು ಇದರ ಘೋಷಣೆ ಹಾಗೂ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯವು ಜನವರಿ ಇಪ್ಪತ್ತಾರು ಶುಕ್ರವಾರ ಅಪರಾಹ್ನ ನಾಲ್ಕು ಗಂಟೆಗೆ ಕುಂಬ್ರ ಮರ್ಕಝ್ ಆವರಣದಲ್ಲಿ ನಡೆಯಲಿದೆ.
ಶಿಲಾನ್ಯಾಸ ಹಾಗೂ ‘ಸಿಲ್ವರಿಯಂ’ ನ ಉದ್ಘಾಟನೆಯನ್ನು ವಿಶ್ವ ವಿಖ್ಯಾತ ಮರ್ಕಝ್ ಸಖಾಫತಿ ಸ್ಸುನ್ನಿಯ್ಯದ ಅಧ್ಯಕ್ಷ , ಸಮಸ್ತ ಮುಶಾವರದ ಉಪಾಧ್ಯಕ್ಷ ಅಮೀನುಶ್ಶರೀಅ ಸಯ್ಯಿದ್ ಅಲೀ ಬಾಫಖೀಹ್ ತಂಙಳ್ ನಿರ್ವಹಿಸಲಿದ್ದಾರೆ.ಅದರೊಂದಿಗೆ ಸಂಸ್ಥೆಯ ನೂತನ ಲೋಗೊವನ್ನು ಪ್ರಕಾಶನ ಮಾಡಲಾಗುವುದು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಪ್ರಮುಖ ಅನಿವಾಸಿ ಉದ್ಯಮಿ, ಮುಸ್ಲಿಮ್ ಮುಂದಾಳು ಸೌದಿ ಅರೇಬಿಯಾ ಜುಬೈಲ್ ನ ‘ ಆಲ್ ಮುಝೈನ್ ಉದ್ಯಮ ಸಂಸ್ಥೆಯ ಅಧ್ಯಕ್ಷ ಹಾಜಿ ಝಕರಿಯಾ ಜೋಕಟ್ಟೆ, ಕಾಟಿಪಳ್ಳ ಮಿಸ್ಬಾಹ್ ಮಹಿಳಾ ಕಾಲೇಜಿನ ಅಧ್ಯಕ್ಷ ಹಾಜಿ ಮಮ್ತಾಝ್ ಅಲಿ ಕೃಷ್ಣಾಪುರ, ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಅಧ್ಯಕ್ಷ ಹಾಜಿ ಕೆ ಪಿ ಅಹ್ಮದ್ ಆಕರ್ಷಣ್, ದ.ಕ.ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮರ್ಕಝುಲ್ ಹುದಾ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಹಾಜಿ ಫಾರೂಖ್ ಕನ್ಯಾನ, ಉದ್ಯಮಿ, ಸುನ್ನೀ ಮುಂದಾಳು ಹಾಜಿ ಶಕೀರ್ ಹೈಸಮ್ , ಮೀಫ್ ಉಪಾಧ್ಯಕ್ಷ ಕೆ ಎಂ ಮುಸ್ತಫಾ ಸುಳ್ಯ ಹಾಗೂ ಇತರ ಪ್ರಮುಖರು, ಅನಿವಾಸಿ ಘಟಕಗಳ ನಾಯಕರು ಭಾಗವಹಿಸುವರು.
ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಅರಿಯಡ್ಕ ಅಧ್ಯಕ್ಷತೆ ವಹಿಸಲಿದ್ದು ಉಪಾಧ್ಯಕ್ಷ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಸಹಕರಿಸಬೇಕೆಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಶೀರ್ ಇಂದ್ರಾಜೆ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)