ಬೆಂಗಳೂರು : ಎಲ್ಲಾ ಧರ್ಮಗಳನ್ನು ಸಮಾನ ಗೌರವದಿಂದ ಕಾಣಬೇಕು ಎಂದು ಸಂವಿಧಾನ ಹೇಳುತ್ತದೆ. ನಾವು ಮನುಷ್ಯರಾಗಿ ಸೌಹಾರ್ದ ಭಾವನೆ ಮೂಡಿಸಬೇಕು. ಇಸ್ಲಾಂ ಶಾಂತಿ ಸಹನೆ ಬೋಧಿಸುತ್ತದೆ. ಸಂವಿಧಾನ ಸಹಿಷ್ಣುತೆ ಹಾಗೂ ಸಹಬಾಳ್ವೆ ಬೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ರವಿವಾರ ಆಯೋಜಿಸಿದ್ದ ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಸಂಘಟನೆಯ ನೂರನೇ ವರ್ಷಚಾರಣೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಾವು ನಮ್ಮಧರ್ಮ ಅನುಸರಿಸಿ, ಅನ್ಯ ಧರ್ಮವನ್ನು ಗೌರವಿಸಬೇಕು. ಕುವೆಂಪು ಹೇಳುವಂತೆ ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಬೇಕು. ಯಾವುದೇ ಧರ್ಮ ಇದ್ದರೂ ಎಲ್ಲರೂ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಶಾಂತಿ ನೆಲೆಸಲು ಸಾಧ್ಯ ಎಂದರು.
ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಸಂಘಟನೆಯು ನೂರನೆ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಲು ಸಂತೋಷವಾಗುತ್ತದೆ. ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ 100 ವರ್ಷ ಪೂರೈಸಿರುವುದು ಒಂದು ಮೈಲಿಗಲ್ಲು. ಇಂತಹ ನೂರನೆ ವರ್ಷದ ಆಚರಣೆ ಮಾಡುವಾಗ ನಾವು ಬಂದಿರುವ ಹಾದಿ ನೋಡಬೇಕು. ಮುಂದಿನ ಗುರಿ ನೋಡಿ, ಅದನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಪ್ರತಿಯೊಬ್ಬರಿಗೂ ಶಿಕ್ಷಣ ಬೇಕು. ಸಂವಿಧಾನದಲ್ಲಿ ಉಚಿತ ಶಿಕ್ಷಣ ಕಡ್ಡಾಯವಾಗಿ ನೀಡಬೇಕು ಎಂದು ಹೇಳಿದೆ. ಸಮಸ್ತ ಸಂಘಟನೆಯು ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಮುಸ್ಲಿಮ್ ಸಮಾಜ ಶಿಕ್ಷಣ ಪಡೆದರೆ ಸ್ವಾಭಿಮಾನದಿಂದ ಬದುಕುವ ಶಕ್ತಿ ಬರುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಇದಕ್ಕೂ ಮುನ್ನ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ಶಿಸ್ತು ಬದ್ಧ ಸಮ್ಮೇಳನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಸ್ಕೆ ಎಸ್ಸೆಸ್ಸೆಫ್ ನೂತನ 2500 ವಿಖಾಯ ಸದಸ್ಯರನ್ನು ರಾಜ್ಯಕ್ಕೆ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ