ಮಂಗಳೂರು: ಮಂಡ್ಯದಲ್ಲಿ ಪ್ರಸ್ತುತ ಸಂಘ ಪ್ರೇರಿತ ಮತೀಯ ಉದ್ವಿಗ್ನ ಚಟುವಟಿಕೆಗಳನ್ನು ಗರಿಷ್ಠ ಮಟ್ಟಕ್ಕೆ ಏರಿಸುವ ಭರದಲ್ಲಿನ ಧ್ವಜ ವಿವಾದದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ ರಾಷ್ಟ್ರ ಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸುವ ಪದಬಳಕೆ ಮಾಡಿ ಹೇಳಿಕೆ ನೀಡಿರುವುದು, ಸಿ.ಟಿ.ರವಿಯಂತಹ ಸಂಘೀ ನಾಯಕರ ಪ್ರಸಕ್ತ ಮನಸ್ಥಿತಿಯನ್ನು ತೋರಿಸುತ್ತಿದೆ.ಸಿ.ಟಿ.ರವಿಗೆ ದೃಷ್ಟಿ ವ್ಯತ್ಯಯ ಸಮಸ್ಯೆ ಇದ್ದಂತೆ ಕಾಣುತ್ತದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ದೇಶದಲ್ಲಿ ಹುಟ್ಟಿ ಬೆಳೆದು, ಈ ದೇಶದ ಆಹಾರ, ನೀರು,ಗಾಳಿ ಸೇವಿಸಿಕೊಂಡು ಇಂದು ರಾಷ್ಟ್ರ ಧ್ವಜವನ್ನು ಗುರುತಿಸಲು ಅಸಾದ್ಯವಾದಷ್ಟು ದೃಷ್ಟಿ ವ್ಯತ್ಯಯ ಸಮಸ್ಯೆ ಇದೆಯೋ ಅಥವಾ ಭಾರತ ದೇಶ ಪ್ರೇಮ ಹೊರತಾದ ತಾಲಿಬಾನಿ ಪ್ರೇಮವೋ ಎಂಬುದಾಗಿ ಉತ್ತರಿಸಬೇಕು.
ಈ ದೇಶದ ಸಾಮಾನ್ಯ ಜನರನ್ನು ಮತ್ತು ಒಂದು ನಿರ್ಧಿಷ್ಟ ಜನ ಸಮುದಾಯವನ್ನು ನಿರಂತರ ಹೀಯಾಳಿಸುತ್ತಾ, ಈ ದೇಶದ ನೈಜ ಪ್ರಜೆಗಳನ್ನು ಜನರು ಸಂಶಯ ದೃಷ್ಟಿಯಿಂದ ನೋಡುವ ರೀತಿಯಲ್ಲಿನ ಗೊಂದಲದ ಹೇಳಿಕೆಗಳ ವೀರ ಸಿ.ಟಿ.ರವಿಗೆ ಇಂದು ಭಾರತದ ತ್ರಿವರ್ಣ ಧ್ವಜ ತಾಲಿಬಾನಿ ಧ್ವಜದ ಹಾಗೆ ಹೋಲಿಕೆಯಾದದ್ದು ಅವರ ದೇಶ ದ್ರೋಹತೆಗೆ ಸಾಕ್ಷಿಯಾಗಿದೆ.ಕೇಂದ್ರ ಸರಕಾರ ಸಿ.ಟಿ.ರವಿಯನ್ನು ತಕ್ಷಣ ಅಫ್ಘಾನಿಸ್ತಾನದ ಕಾಬೂಲ್ ಗೆ ಗಡೀಪಾರುಗೊಳಿಸಬೇಕಿದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)