ಮಂಗಳೂರು: ಮಂಡ್ಯದಲ್ಲಿ ಪ್ರಸ್ತುತ ಸಂಘ ಪ್ರೇರಿತ ಮತೀಯ ಉದ್ವಿಗ್ನ ಚಟುವಟಿಕೆಗಳನ್ನು ಗರಿಷ್ಠ ಮಟ್ಟಕ್ಕೆ ಏರಿಸುವ ಭರದಲ್ಲಿನ ಧ್ವಜ ವಿವಾದದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ ರಾಷ್ಟ್ರ ಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸುವ ಪದಬಳಕೆ ಮಾಡಿ ಹೇಳಿಕೆ ನೀಡಿರುವುದು, ಸಿ.ಟಿ.ರವಿಯಂತಹ ಸಂಘೀ ನಾಯಕರ ಪ್ರಸಕ್ತ ಮನಸ್ಥಿತಿಯನ್ನು ತೋರಿಸುತ್ತಿದೆ.ಸಿ.ಟಿ.ರವಿಗೆ ದೃಷ್ಟಿ ವ್ಯತ್ಯಯ ಸಮಸ್ಯೆ ಇದ್ದಂತೆ ಕಾಣುತ್ತದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ದೇಶದಲ್ಲಿ ಹುಟ್ಟಿ ಬೆಳೆದು, ಈ ದೇಶದ ಆಹಾರ, ನೀರು,ಗಾಳಿ ಸೇವಿಸಿಕೊಂಡು ಇಂದು ರಾಷ್ಟ್ರ ಧ್ವಜವನ್ನು ಗುರುತಿಸಲು ಅಸಾದ್ಯವಾದಷ್ಟು ದೃಷ್ಟಿ ವ್ಯತ್ಯಯ ಸಮಸ್ಯೆ ಇದೆಯೋ ಅಥವಾ ಭಾರತ ದೇಶ ಪ್ರೇಮ ಹೊರತಾದ ತಾಲಿಬಾನಿ ಪ್ರೇಮವೋ ಎಂಬುದಾಗಿ ಉತ್ತರಿಸಬೇಕು.
ಈ ದೇಶದ ಸಾಮಾನ್ಯ ಜನರನ್ನು ಮತ್ತು ಒಂದು ನಿರ್ಧಿಷ್ಟ ಜನ ಸಮುದಾಯವನ್ನು ನಿರಂತರ ಹೀಯಾಳಿಸುತ್ತಾ, ಈ ದೇಶದ ನೈಜ ಪ್ರಜೆಗಳನ್ನು ಜನರು ಸಂಶಯ ದೃಷ್ಟಿಯಿಂದ ನೋಡುವ ರೀತಿಯಲ್ಲಿನ ಗೊಂದಲದ ಹೇಳಿಕೆಗಳ ವೀರ ಸಿ.ಟಿ.ರವಿಗೆ ಇಂದು ಭಾರತದ ತ್ರಿವರ್ಣ ಧ್ವಜ ತಾಲಿಬಾನಿ ಧ್ವಜದ ಹಾಗೆ ಹೋಲಿಕೆಯಾದದ್ದು ಅವರ ದೇಶ ದ್ರೋಹತೆಗೆ ಸಾಕ್ಷಿಯಾಗಿದೆ.ಕೇಂದ್ರ ಸರಕಾರ ಸಿ.ಟಿ.ರವಿಯನ್ನು ತಕ್ಷಣ ಅಫ್ಘಾನಿಸ್ತಾನದ ಕಾಬೂಲ್ ಗೆ ಗಡೀಪಾರುಗೊಳಿಸಬೇಕಿದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ