SYS ಮತ್ತು SSF ಹೂಹಾಕುವಕಲ್ಲು ಶಾಖಾ ವತಿಯಿಂದ ಇಂದು “ರಮಳಾನ್ ಕಿಟ್ ವಿತರಣಾ” ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಬಿ.ಜೆ.ಎಂ ಹೂಹಾಕುವಕಲ್ಲು ಖತೀಬರಾದ ಬಹು! ರಫೀಕ್ ಅಹ್ಸನಿ ಕಕ್ಕೆಪದವು ಉಸ್ತಾದರು ಉದ್ಘಾಟಿಸಿದರು.

ವೇದಿಕೆಯಲ್ಲಿ ಎಸ್.ವೈ,ಎಸ್ ಅಧ್ಯಕ್ಷರಾದ ಮೊಯಿದಿನ್ ಕೆ ತೋಟಾಲ್, SSF ಶಾಖಾದ್ಯಕ್ಷರಾದ ಹಮೀದ್ ತೋಟಾಲ್, ಕೆ.ಸಿ.ಎಫ್ ಕಾರ್ಯಕಾರ್ಯರಾದ ಇಬ್ರಾಹಿಂ ಖಲೀಲ್ ,ಉಳ್ಳಾಲ ಡಿವಿಷನ್ ಸದಸ್ಯರಾದ ಅಜೀಜ್ ಎಚ್.ಕಲ್ಲು, ಶಾಖಾ ನಾಯಕರಾದ, ಹಮೀದ್ ಕಿಲಾರಿ, ಉಸ್ಮಾನ್ ಎನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸರಳ ಸಮಾರಂಭದಲ್ಲಿ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು. ಕಿಟ್ ಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಹೂಹಾಕುವಕಲ್ಲು ಶಾಖೆಯು ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಈ ಸಾಂತ್ವನ ಯೋಜನೆಯು ಸಾರ್ವಜನಿಕ ವಲಯದಿಂದ ಮೆಚ್ಚುಗೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ