ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ನಮ್ಮ ತೆರಿಗೆ ನಮ್ಮ ಹಕ್ಕು ಮತ್ತು ಹಿಂದೂಗಳು ಪಾವತಿಸುವ ತೆರಿಗೆ ಹಿಂದೂಗಳಿಗೆ ಮಾತ್ರ ವಿನಿಯೋಗವಾಗಬೇಕು ಎಂಬಿತ್ಯಾದಿಯಾಗಿ ಸಂಘ ಪ್ರೇರಿತ ಹೇಳಿಕೆ ನೀಡಿರುವ ವಿರುದ್ಧ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಪ್ರತಿಕ್ರಿಯಿಸಿದ್ದಾರೆ.
ಪೂಂಜಾ ಅವರು ಈ ದೇಶದ ವಿದೇಶೀ ವಿನಿಮಯ ಕಾನೂನು ಅಸ್ತಿತ್ವದಲ್ಲಿ ಇದೆಯೇ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುವುದು ಖೇದಕರ. ಹಿಂದೂಗಳ ತೆರಿಗೆ ಹಿಂದೂಗಳಿಗೆ ಎಂದು ಬುರುಡೆ ಬಿಡುವ ಪೂಂಜಾ ಹಾಲಿ ಅಸ್ತಿತ್ವದಲ್ಲಿರುವ ವಿದೇಶಿ ವಿನಿಮಯ ಕಾನೂನು ಅನ್ನು ರದ್ದತಿ ಮಾಡಲು ಆಗ್ರಹಿಸಲಿ!. ಈ ದೇಶಕ್ಕೆ ಪಾವತಿ ಆಗುವಂತಹ ಅಗಾಧ ವಿದೇಶಿ ವಿನಿಮಯ ಶುಲ್ಕ, ಅಬಕಾರಿ ಶುಲ್ಕ,ಸೀಮಾ ಶುಲ್ಕದಂತಹ ಭಾರತಕ್ಕೆ ಆಗುತ್ತಿರುವ ಆದಾಯ ಹಿಂದುಯೇತರ ಮೂಲಗಳಿಂದ ಬರುತ್ತಿದ್ದು,ಪೂಂಜಾನಂತಹ ಅವಿವೇಕಿ ಜನರು ಇದನ್ನು ಸರಿಯಾಗಿ ತಿಳಿಯಬೇಕೆಂದು ಅಶ್ರಫ್ ಹೇಳಿದ್ದಾರೆ.
ಈ ದೇಶದ ಸಾಮಾನ್ಯ ಜನರ ತೆರಿಗೆ, ಕರ, ಶುಲ್ಕಗಳು ಆಯಾ ಸೇವೆಗೆ ಅನುಗುಣವಾಗಿ ಸರ್ಕಾರ ವಸೂಲಿ ಮಾಡುತ್ತಿದ್ದು ಯಾವುದೇ ಧರ್ಮದ ಆಧಾರದಲ್ಲಿ ಅಲ್ಲ ಎಂದು ತಿಳಿಯಬೇಕು. ಈ ದೇಶದ ಬಹು ಸಂಖ್ಯಾತ ವೈದಿಕೇತರರ ತರಿಗೆಯು ಈ ದೇಶದ ಮೂಲಭೂತ ಸೌಕರ್ಯಗಳನ್ನು ನಿರ್ಮಾಣ ಮಾಡಲು ವಿನಿಯೋಗ ಆಗುತ್ತಿದೆ ಎಂಬುದನ್ನು ಅರಿಯಬೇಕು. ಈ ದೇಶದ ವೈದಿಕೇತರ ಮೂಲದ ತೆರಿಗೆಯಿಂದ ನಿರ್ಮಿಸಲಾದ ಅದೆಷ್ಟೋ ಸಂಸ್ಥೆಗಳನ್ನು ಹಾಲಿ ಕೇಂದ್ರ ಸರ್ಕಾರದಲ್ಲಿರುವ ಪ್ರತಿನಿಧಿ ಮುಖ್ಯಸ್ಥರು ಅಂಬಾನಿ,ಅದಾನಿ ಗೆ ಮಾರಾಟ ಮಾಡಿದ್ದು, ಇನ್ನು ಜನರು ಪಾವತಿಸುವ ತೆರಿಗೆ ಸಂಗ್ರಹಕ್ಕೂ ಅಂಬಾನಿ, ಅದಾನಿಗಳನ್ನು ನೇಮಿಸುವ ತಮ್ಮ ಷಡ್ಯಂತ್ರದ ಹೇಳಿಕೆಗೆ ಜನರು ಬಲಿಯಾಗಲಾರರು,ತಿಳಿದಿರಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ