ಬಂಟ್ವಾಳ: ಹನಫಿ ಸುನ್ನಿಗಳಿಗಾಗಿ ಯಾರನ್ನೂ ಖಾಝಿಯಾಗಿ ನೇಮಕ ಮಾಡಿಲ್ಲ, ಖಾಝಿ ಸಂಬಂಧಿತ ಯಾವುದೇ ರೀತಿಯ ಗುಮಾನಿಗಳಿಗೆ ಹನಫಿ ಸುನ್ನಿಗಳು ಬೆಲೆಕೊಡಬಾರದು. ಯಾರಾದರೂ ಹೇಳಿಕೆ ಕೊಟ್ಟಿದ್ದರೆ ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ನ ರಾಜ್ಯಾಧ್ಯಕ್ಷ ಕಾವಳಕಟ್ಟೆ ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ರವರು ಹೇಳಿದ್ದಾರೆ.
ಅವರು ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್ ನ ಕಾವಳಕಟ್ಟೆ ಅಲ್ ಖಾದಿಸಾ ವಿದ್ಯಾಸಂಸ್ಥೆ ಯಲ್ಲಿ ನಡೆದ ಬೃಹತ್ ಅಮ್ಜದಿ ಸಂಗಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಇತ್ತೀಚೆಗೆ ಹನಫಿಗಳಿಗಾಗಿ ಓರ್ವ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿ ಮಂಗಳೂರಿನ ಮುಖಂಡರೊಬ್ಬರು ಹನಫಿಗಳ ಖಾಝಿ ಎಂಬುದಾಗಿ ಹೇಳಿಕೆ ನೀಡಿದ್ದರು, ಇದರ ವಿರುದ್ಧ ಕಾವಳಕಟ್ಟೆ ಹಝ್ರತ್ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅಂತಹ ವೈಯಕ್ತಿಕ ನಿಲುವಿಗೆ ಹನಫಿ ಸುನ್ನಿಗಳು ಬೆಲೆ ಕಲ್ಪಿಸುವುದಿಲ್ಲ ಎಂದು ಹಝ್ರತ್ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎ. ಕೆ. ರಝಾ ಅಮ್ಜದಿ ಉಪ್ಪಿನಂಗಡಿ ವಹಿಸಿದ್ದರು. ಅಮ್ಜದೀಸ್ ನ ರಾಜ್ಯ ನಿರ್ದೇಶಕ ಯೂಸುಫ್ ರಝಾ ಅಮ್ಜದಿ ದಾವಣಗೆರೆ, ಡಾ. ಹನೀಫ್ ಅಮ್ಜದಿ ಬೆಳ್ಳಾರೆ ಪ್ರಾಸ್ತಾವಿಕ ಭಾಷಣ ಮಾಡಿದರು.
ವೇದಿಕೆಯಲ್ಲಿ ಅಝೀಝ್ ಅಮ್ಜದಿ, ನಝೀರ್ ಅಮ್ಜದಿ ಮಾಣಿ, ಬಿಲಾಲ್ ಅಮ್ಜದಿ ಬೆಳಗಾವಿ, ರಫೀಕ್ ಅಮ್ಜದಿ ಮಾವಿನಕಟ್ಟೆ, ಇರ್ಷಾದ್ ಅಮ್ಜದಿ ಮಠ, ಅಬ್ದುಲ್ ಖಾದರ್ ಅಮ್ಜದಿ ಗೋವಿಂದೂರು, ಆಸಿಫ್ ಅಮ್ಜದಿ , ಉಮರುಲ್ ಫಾರೂಕ್ ರಝಾ ಅಮ್ಜದಿ ಕುಂಡಡ್ಕ, ಅಶ್ರಫ್ ಅಮ್ಜದಿ ಮಲಾರ್ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯಅಮ್ಜದೀಸ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಹಾಫಿಝ್ ಮುಈನ್ ರಝಾ ಅಮ್ಜದಿ ಉಳ್ಳಾಲ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ