ಡಿ.ಕೆ.ಎಸ್.ಸಿ. ಅಲ್ ಖರ್ಜ್ (ರಿಯಾದ್) ಸಮಿತಿಯ ವಾರ್ಷಿಕ ಮಹಾಸಭೆಯು ದಿನಾಂಕ 09-02-2024ರ ಗುರುವಾರ ಅಸ್ತ ಶುಕ್ರವಾರ ರಾತ್ರಿ ಸಮಿತಿಯ ಅಧ್ಯಕ್ಷರಾದ ಜನಾಬ್ ಹಮೀದ್ ಹೊಸಂಗಡಿ ಇವರ ಅಧ್ಯಕ್ಷತೆಯಲ್ಲಿ ಗೂಡಿನಬಳಿ ಬಳಗದ ನಿವಾಸ ದಿಲಂನಲ್ಲಿ ಜರಗಿತು.
ಖಲೀಲ್ ಝುಹ್ರಿ ಇವರ ದುಆದ ಮೂಲಕ ಶುಭಾರಂಭಗೊಂಡ ಸಭೆಯಲ್ಲಿ ಬಶೀರ್ ಕೃಷ್ಣಾಪುರ ಖಿರಾಅತ್ ಪಾರಾಯಣಗೈದರು.
ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಹೊಸಂಗಡಿ ಸಭಿಕರನ್ನು ಸ್ವಾಗತಿಸಿದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕೋಶಾಧಿಕಾರಿ ದಾವೂದ್ ಕಜಮಾರ್ ಸಭೆಯನ್ನು ಉದ್ಘಾಟಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಮುನೀರ್ ಕೃಷ್ಣಾಪುರ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅಂಗೀಕಾರವನ್ನು ಪಡೆದುಕೊಂಡರು.
ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಜನಾಬ್ ಅಬ್ದುರ್ರಹ್ಮಾನ್ ಸುಲೈಮಾನ್ ರವರ ನೇತೃತ್ವದಲ್ಲಿ 2024-2025ರ ಸಾಲಿಗೆ ಈ ಕೆಳಗಿ ಸುದೃಢವಾದ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಜಾವಿದ್ ಗೂಡಿನ ಬಳಿ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಕೃಷ್ಣಾಪುರ, ಕೋಶಾಧಿಕಾರಿಯಾಗಿ ಬದ್ರುದ್ದೀನ್ ಗುರುಪುರ, ಉಪಾದ್ಯಕ್ಷರಾಗಿ ನಾಸಿರ್ ಗೂಡಿನಬಳಿ, ಕಾರ್ಯದರ್ಶಿಗಳಾಗಿ ಶಬೀರ್ ಗೂಡಿನ ಬಳಿ, ಬಶೀರ್ ಕೃಷ್ಣಾಪುರ, ಸಲಹೆಗಾರರಾಗಿ ಹಮೀದ್ ಹೊಸಂಗಡಿ, ಸಂಚಾಲಕರಾಗಿ ರವೂಫ್ ಗೂಡಿನಬಳಿ, ಆಯ್ಕೆಗೊಂಡರು.
ನೂತನ ಜತೆಕಾರ್ಯದರ್ಶಿ ಶಬೀರ್ ಗೂಡಿನಬಳಿ ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಚ್ಚಿಲ ನಿರೂಪಿಸಿದರು.
ಮೂರು ಸ್ವಲಾತಿನೊಂದಿಗೆ ಸಭೆಯು ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು