ಡಿ.ಕೆ.ಎಸ್.ಸಿ. ಅಲ್ ಖರ್ಜ್ (ರಿಯಾದ್) ಸಮಿತಿಯ ವಾರ್ಷಿಕ ಮಹಾಸಭೆಯು ದಿನಾಂಕ 09-02-2024ರ ಗುರುವಾರ ಅಸ್ತ ಶುಕ್ರವಾರ ರಾತ್ರಿ ಸಮಿತಿಯ ಅಧ್ಯಕ್ಷರಾದ ಜನಾಬ್ ಹಮೀದ್ ಹೊಸಂಗಡಿ ಇವರ ಅಧ್ಯಕ್ಷತೆಯಲ್ಲಿ ಗೂಡಿನಬಳಿ ಬಳಗದ ನಿವಾಸ ದಿಲಂನಲ್ಲಿ ಜರಗಿತು.
ಖಲೀಲ್ ಝುಹ್ರಿ ಇವರ ದುಆದ ಮೂಲಕ ಶುಭಾರಂಭಗೊಂಡ ಸಭೆಯಲ್ಲಿ ಬಶೀರ್ ಕೃಷ್ಣಾಪುರ ಖಿರಾಅತ್ ಪಾರಾಯಣಗೈದರು.
ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಹೊಸಂಗಡಿ ಸಭಿಕರನ್ನು ಸ್ವಾಗತಿಸಿದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕೋಶಾಧಿಕಾರಿ ದಾವೂದ್ ಕಜಮಾರ್ ಸಭೆಯನ್ನು ಉದ್ಘಾಟಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಮುನೀರ್ ಕೃಷ್ಣಾಪುರ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅಂಗೀಕಾರವನ್ನು ಪಡೆದುಕೊಂಡರು.
ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಜನಾಬ್ ಅಬ್ದುರ್ರಹ್ಮಾನ್ ಸುಲೈಮಾನ್ ರವರ ನೇತೃತ್ವದಲ್ಲಿ 2024-2025ರ ಸಾಲಿಗೆ ಈ ಕೆಳಗಿ ಸುದೃಢವಾದ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಜಾವಿದ್ ಗೂಡಿನ ಬಳಿ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಕೃಷ್ಣಾಪುರ, ಕೋಶಾಧಿಕಾರಿಯಾಗಿ ಬದ್ರುದ್ದೀನ್ ಗುರುಪುರ, ಉಪಾದ್ಯಕ್ಷರಾಗಿ ನಾಸಿರ್ ಗೂಡಿನಬಳಿ, ಕಾರ್ಯದರ್ಶಿಗಳಾಗಿ ಶಬೀರ್ ಗೂಡಿನ ಬಳಿ, ಬಶೀರ್ ಕೃಷ್ಣಾಪುರ, ಸಲಹೆಗಾರರಾಗಿ ಹಮೀದ್ ಹೊಸಂಗಡಿ, ಸಂಚಾಲಕರಾಗಿ ರವೂಫ್ ಗೂಡಿನಬಳಿ, ಆಯ್ಕೆಗೊಂಡರು.
ನೂತನ ಜತೆಕಾರ್ಯದರ್ಶಿ ಶಬೀರ್ ಗೂಡಿನಬಳಿ ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಚ್ಚಿಲ ನಿರೂಪಿಸಿದರು.
ಮೂರು ಸ್ವಲಾತಿನೊಂದಿಗೆ ಸಭೆಯು ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ