ಉಪ್ಪಿನಂಗಡಿ: ಪ್ರಮುಖ ವಿದ್ವಾಂಸರು, ಸುನ್ನೀ ಸಂಘಟನೆಗಳ ಸಕ್ರೀಯ ನಾಯಕತ್ವ ಸಯ್ಯಿದ್ ಕರ್ವೇಲ್ ಸಾದತ್ ತಂಙಳ್ ಇಂದು ಬೆಳಿಗ್ಗೆ ವಫಾತಾದರು.
ಚಿರಯುವಕರಂತೆ ಸುನ್ನತ್ ಜಮಾಅತಿಗಾಗಿ ಹಗಳಿರುಳು ದುಡಿಯುತ್ತಿದ್ದ ಪ್ರವಾದಿ ಕುಟುಂಬದ ಕರುಳ ಕುಡಿ ಸುನ್ನೀ ಜನ ಸಮೂಹಕ್ಕೆ ಮಾರ್ಗದರ್ಶಿಯಾಗಿದ್ದ ಸಯ್ಯಿದರು, ಕಳೆದ ಒಂದು ವಾರದ ಹಿಂದೆ ನಡೆದ ರಿಕ್ಷಾ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮುಂಜಾನೆ ಹೊತ್ತು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾಗಿ ಸಯ್ಯಿದರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ನಿನ್ನೆ ತಾನೇ ತಂಙಳರ ಸಹೋದರಿಯ ಮಗಳು ಹೃದಯಾಘಾತದಿಂದ ನಿಧನ ಹೊಂದಿದ್ದು ಇದರ ಬೆನ್ನಲ್ಲೇ ತಂಙಳರ ಮರಣ ಸಂಭವಿಸಿದೆ. ಸಯ್ಯಿದರ ಕುಟುಂಬಸ್ಥರು ಮತ್ತು ಸುನ್ನೀ ಸಮೂಹವನ್ನು ದುಃಖದ ಕಣ್ಣೀರಿನಲ್ಲಿ ಮುಳುಗುಸಿದೆ.
ಅವರ ಕುಟುಂಬಕ್ಕೆ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅಲ್ಲಾಹು ನೀಡಲಿ. ಎಲ್ಲಾ ಉಲಮಾ,ಉಮರಾ, ನಾಯಕರು ,ಕಾರ್ಯಕರ್ತರು ತಂಙಳರ ಮೇಲೆ ಕುರುಆನ್ ಓದಿ, ತಹ್ಲೀಲ್ ಹೇಳಿ ದುಆ ಮಾಡಬೇಕಾಗಿ ಸುನ್ನೀ ಸಂಘ ಸಂಸ್ಥೆಗಳು ವಿನಂತಿಸಿವೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ