ಉಪ್ಪಿನಂಗಡಿ: ಪ್ರಮುಖ ವಿದ್ವಾಂಸರು, ಸುನ್ನೀ ಸಂಘಟನೆಗಳ ಸಕ್ರೀಯ ನಾಯಕತ್ವ ಸಯ್ಯಿದ್ ಕರ್ವೇಲ್ ಸಾದತ್ ತಂಙಳ್ ಇಂದು ಬೆಳಿಗ್ಗೆ ವಫಾತಾದರು.
ಚಿರಯುವಕರಂತೆ ಸುನ್ನತ್ ಜಮಾಅತಿಗಾಗಿ ಹಗಳಿರುಳು ದುಡಿಯುತ್ತಿದ್ದ ಪ್ರವಾದಿ ಕುಟುಂಬದ ಕರುಳ ಕುಡಿ ಸುನ್ನೀ ಜನ ಸಮೂಹಕ್ಕೆ ಮಾರ್ಗದರ್ಶಿಯಾಗಿದ್ದ ಸಯ್ಯಿದರು, ಕಳೆದ ಒಂದು ವಾರದ ಹಿಂದೆ ನಡೆದ ರಿಕ್ಷಾ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮುಂಜಾನೆ ಹೊತ್ತು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾಗಿ ಸಯ್ಯಿದರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ನಿನ್ನೆ ತಾನೇ ತಂಙಳರ ಸಹೋದರಿಯ ಮಗಳು ಹೃದಯಾಘಾತದಿಂದ ನಿಧನ ಹೊಂದಿದ್ದು ಇದರ ಬೆನ್ನಲ್ಲೇ ತಂಙಳರ ಮರಣ ಸಂಭವಿಸಿದೆ. ಸಯ್ಯಿದರ ಕುಟುಂಬಸ್ಥರು ಮತ್ತು ಸುನ್ನೀ ಸಮೂಹವನ್ನು ದುಃಖದ ಕಣ್ಣೀರಿನಲ್ಲಿ ಮುಳುಗುಸಿದೆ.
ಅವರ ಕುಟುಂಬಕ್ಕೆ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅಲ್ಲಾಹು ನೀಡಲಿ. ಎಲ್ಲಾ ಉಲಮಾ,ಉಮರಾ, ನಾಯಕರು ,ಕಾರ್ಯಕರ್ತರು ತಂಙಳರ ಮೇಲೆ ಕುರುಆನ್ ಓದಿ, ತಹ್ಲೀಲ್ ಹೇಳಿ ದುಆ ಮಾಡಬೇಕಾಗಿ ಸುನ್ನೀ ಸಂಘ ಸಂಸ್ಥೆಗಳು ವಿನಂತಿಸಿವೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)