ರಿಯಾದ್: ಸೌದಿ ಅರೇಬಿಯಾದಲ್ಲಿ ನಿಯಂತ್ರಿತ ಡ್ರಗ್ಸ್ ಹೊಂದಿದ್ದಕ್ಕಾಗಿ ಜೈಲಿನಲ್ಲಿದ್ದ ಮಲಯಾಳಿಯೊಬ್ಬರು 60 ದಿನಗಳ ನಂತರ ಬಿಡುಗಡೆಗೊಂಡಿದ್ದಾರೆ. ತಮ್ಮ ಕೈವಶವಿರುವುದು ಊರಿನ ವೈದ್ಯರು ಸೂಚಿಸಿದಂತೆ ಸೇವಿಸಲಾಗುವ ಔಷಧಿ ಎಂಬುದು ಲ್ಯಾಬ್ ಪರೀಕ್ಷೆಯಲ್ಲಿ ಕಂಡುಬಂದಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ಗೆ ಮನವರಿಕೆಯಾದ ಬಳಿಕ ಪಾಲಕ್ಕಾಡ್ ಮೂಲದ ಪ್ರಭಾಕರನ್ ಐಸಾಕ್ ಎಂಬವರನ್ನು ಬಿಡುಗಡೆ ಮಾಡಲಾಗಿದೆ.
ತಬೂಕ್ನಲ್ಲಿ ಘನ ವಾಹನಗಳ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅವರು, ರಜೆಯ ಬಳಿಕ ಕೆಲಸಕ್ಕೆ ತೆರಳಿದ್ದ ಮಧ್ಯೆ, ಮಾದಕ ದ್ರವ್ಯ ವಿಭಾಗದ ವಿಶೇಷ ದಳ ಅವರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ತಪಾಸಣೆ ನಡೆಸಿದ್ದು, ಇವರ ಬಳಿ ದೇಶದಿಂದ ತಂದಿದ್ದ ಡ್ರಗ್ಸ್ ಪತ್ತೆಯಾಗಿದೆ. ಇದು ನೋವು ನಿವಾರಕವಾಗಿ ಬಳಸಲಾದ ಮದ್ದು ಎಂದು ತನಿಖಾ ತಂಡಕ್ಕೆ ತಿಳಿಸಿದರೂ, ಅದನ್ನು ಸಾಬೀತುಪಡಿಸಲು ಅವರ ಬಳಿ ಸಾಕಷ್ಟು ದಾಖಲೆಗಳಿರಲಿಲ್ಲ, ಆದ್ದರಿಂದ ಅವರನ್ನು ಬಂಧಿಸಲಾಯಿತು.
ಪ್ರಭಾಕರ್ ಅವರ ಬಿಡುಗಡೆಗಾಗಿ ಹಾಯಿಲ್ ಕೆಎಂಸಿಸಿ ಕಲ್ಯಾಣ ವಿಭಾಗದ ಅಧಿಕಾರಿ ಪಿ.ಎ. ಸಿದ್ದೀಕ್ ಮಟ್ಟನ್ನೂರು ಪ್ರಯತ್ನಿಸಿದ್ದು, ಭಾರತೀಯ ರಾಯಭಾರ ಕಚೇರಿಯಿಂದ ಅನುಮತಿ ಪತ್ರದೊಂದಿಗೆ ಅಧಿಕಾರಿಗಳನ್ನು ಸಂಪರ್ಕಿಸಿ ಬಿಡುಗಡೆ ಮಾಡಿದ್ದಾರೆ.
ತಮ್ಮ ಕೈಯಲ್ಲಿರುವ ಔಷಧಿಗಳೊಂದಿಗೆ ವೈದ್ಯರ ಸೂಚನೆಗಳು ಮತ್ತು ಪ್ರಿಸ್ಕ್ರಿಪ್ಷನ್ ಪತ್ರವನ್ನು ತಮ್ಮೊಂದಿಗೆ ಕೊಂಡೊಯ್ಯಲು ಮರೆಯಬಾರದು ಎಂದು ಸಿದ್ದೀಕ್ ವಲಸಿಗರಲ್ಲಿ ಮನವಿ ಮಾಡಿದ್ದಾರೆ.
(ಫೋಟೋ: ಸಾಂಕೇತಿಕ ಚಿತ್ರ (ಎಡ), ಸಾಮಾಜಿಕ ಕಾರ್ಯಕರ್ತ ಪಿಎ ಸಿದ್ದೀಕ್ ಮಟ್ಟನೂರು ಅವರು ಪ್ರಭಾಕರ ಇಸಾಕ್ ಅವರಿಗೆ ದಾಖಲೆಗಳನ್ನು ಹಸ್ತಾಂತರಿಸುತ್ತಿದ್ದಾರೆ (ಬಲ)
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ