ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ರೈಲ್ವೆ ಮಂಡಳಿ ಬುಧವಾರ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲು. ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ.
ವಂದೇಭಾರತ್ ರೈಲು ಸೇವೆಯನ್ನು ಮಂಗಳೂರು ತನಕ ವಿಸ್ತರಿಸಿದ ಅಧಿಕೃತ ತೀರ್ಮಾ ನವನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವಿದ್ಯುಕ್ತವಾಗಿ ಪ್ರಕಟಿಸಿದ್ದಾರೆ.
ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ.
ಆದರೆ ಹೀಗೆ ವಿಸ್ತರಿಸಲ್ಪಟ್ಟ ಈ ರೈಲು ಸೇವೆ ಮಂಗಳೂರಿನಿಂದ ಸೇವೆ ಆರಂಭಿಸುವ ದಿನಾಂಕವನ್ನು ಈ ತನಕ ಪ್ರಕಟಿಸಲಾಗಿಲ್ಲ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ