ಬಹರೈನ್ ಸುನ್ನೀ ಕನ್ನಡಿಗರ ಆವೇಶ ಕೆ.ಸಿ.ಎಫ್, ವರ್ಷಂಪ್ರತಿ ನಡೆಸುವ ಬೃಹತ್ ಇಫ್ತಾರ್ ಸಂಗಮಕ್ಕೆ ಸರ್ವ ರೀತಿಯಲ್ಲೂ ಸಜ್ಜುಗೊಳ್ಳುತ್ತಿದೆ.
ಇದು ಕೇವಲ ಇಫ್ತಾರ್ ಮಾತ್ರವಲ್ಲ ಬಹರೈನಿನ ಅಷ್ಟ ದಿಕ್ಕುಗಳಿಂದಲೂ ಆಗಮಿಸುವ ಅನಿವಾಸಿ ಕನ್ನಡಿಗರ ಸಂಗಮವೂ ಆಗಿದೆ.
ದಿನಾಂಕ 1-6-2018 ಶುಕ್ರವಾರ ಸಂಜೆ 5 ಗಂಟೆಗೆ ನಡೆಯುವ ಬೃಹತ್ ಇಫ್ತಾರ್ ಸಂಗಮಕ್ಕೆ ಕೆ.ಸಿ.ಎಫ್ ಅಂತರ್ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷರೂ, ಕರ್ನಾಟಕ ಎಸ್. ವೈ.ಎಸ್ ಪ್ರಧಾನ ಕಾರ್ಯದರ್ಶಿ, ಭಾಷಣ ರತ್ನ ಎಂ.ಎಸ್.ಎಂ ಝೈನಿ ಕಾಮಿಲ್ ಸಖಾಫಿ ಉಸ್ತಾದರು ಮುಖ್ಯ ಪ್ರಭಾಷಣಗಾರರಾಗಿ ಆಗಮಿಸಲಿದ್ದಾರೆ.
ವಿಶೇಷ ಅತಿಥಿಯಾಗಿ ಪ್ಯಾಲೆಸ್ತೀನ್ ರಾಯಭಾರಿ ಸನ್ಮಾನ್ಯ ತ್ವಾಹ ಎಂ.ಅಬ್ದುಲ್ ಖಾದರ್ ಆಗಮಿಸಿಸಲಿದ್ದಾರೆ. ಅಲ್ಲದೆ ಹಲವಾರು ಉಲಮಾಗಳು, ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.
ಬಹರೈನಿನ ವಿವಿಧ ಲೇಬರ್ ಕ್ಯಾಂಪ್ ಗಳಲ್ಲಿ ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಆಹ್ವಾನಿಸಿ ಈ ಸಂಗಮದಲ್ಲಿ ಭಾಗವಹಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿ ಸಬೇಕೆಂದು ಇಫ್ತಾರ್ ಸ್ವಾಗತ ಸಮಿತಿ ಚೇರ್ಮ್ಯಾನ್ ಜಮಾಲುದ್ದೀನ್ ವಿಟ್ಟಲ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ