ಮಂಗಳೂರು: ಅನಿವಾಸಿ ಮುಸ್ಲಿಂ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ಇದರ ದಶಮಾನೋತ್ಸವದ ಪ್ರಯುಕ್ತ ಸ್ವಾಗತ ಸಮಿತಿ ರಚನಾ ಸಭೆಯು ನಗರದ ಓಷಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ದುಆ ನೆರವೇರಿಸಿದರು, ಕರ್ನಾಟಕ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಮುಹಮ್ಮದ್ ಸಅದಿ ವಳವೂರು ಅಧ್ಯಕ್ಷತೆ ವಹಿಸಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ‘ಕೆಸಿಎಫ್ ಕಳೆದ ಹತ್ತು ವರ್ಷಗಳಿಂದ ದೇಶ ವಿದೇಶಗಳಲ್ಲಿ ವಿವಿಧ ರೀತಿಯ ಸಾಮಾಜಿಕ ಶೈಕ್ಷಣಿಕ ಸಾಂತ್ವನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತಿದ್ದು ಇದೀಗ ದಶಮಾನೋತ್ಸವದ ಪ್ರಯುಕ್ತ ಅರ್ಹ ಬಡ ಕುಟುಂಬಗಳ ಹತ್ತು ಜೋಡಿಗಳ ಉಚಿತ ಸಾಮೂಹಿಕ ವಿವಾಹ ಹಾಗೂ ಡಿಸೇನಿಯಮ್ ಅಂತರಾಷ್ಟ್ರೀಯ ಸಮ್ಮೇಳನ 2024 ಮೇ19 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿದೆ ಎಂದು ಘೋಷಿಸಿದರು.
ಇದರ ಜೊತೆಗೆ ಹತ್ತು ಬಡ ಕುಟುಂಬಗಳಿಗೆ ದಾರುಲ್ ಅಮಾನ್ ವಸತಿ ನಿರ್ಮಾಣ, ಹತ್ತು ಕೊಳವೆ ಬಾವಿ ಯೋಜನೆ, ಸ್ಟೂಡೆಂಟ್ಸ್ ಕಾನ್ಫರೆನ್, ವಿಐಪಿ ಕಾನ್ಫರೆನ್ಸ್, ಫಾಮಿಲಿ ಮುಲಾಖಾತ್ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಕೂಡ ಈ ಸಂದರ್ಭ ನಡೆಯಲಿವೆ ಎಂದು ತಿಳಿಸಿದರು.
ಈ ಕಾರ್ಯಕ್ರಮಗಳ ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಮಟ್ಟದ ಸ್ವಾಗತ ಸಮಿತಿ ರಚಿಸಲಾಯಿತು.
ಸ್ವಾಗತ ಸಮಿತಿ ನಿರ್ದೇಶಕಾರಾಗಿ ದ.ಕ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ಅಲ್ ಬುಖಾರಿ ಕೂರತ್ ತಂಙಳ್, ಸಮಸ್ತ ಉಪಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್, ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಕಾರ್ಯದರ್ಶಿ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡು, ಉಪಾಧ್ಯಕ್ಷ ಮುಹಮ್ಮದ್ ಸಅದಿ ವಳವೂರು, ಕೆಎಂಜೆ ರಾಜ್ಯಾಧ್ಯಕ್ಷ ಡಾ.ಪಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್, ಎಸ್ಎಂಎ ರಾಜ್ಯಾಧ್ಯಕ್ಷ ಸಯ್ಯಿದ್ ಇಸ್ಮಾಈಲ್ ತಂಙಳ್ ಉಜಿರೆ, ಯೆನೆಪೋಯ ಮುಹಮ್ಮದ್ ಕುಂಞಿ, ಮುಹಮ್ಮದ್ ಹಾಜಿ ಸಾಗರ್, ಎಸ್ಎಂಆರ್ ರಶೀದ್ ಹಾಜಿ ರವರನ್ನು ನೇಮಿಸಲಾಯಿತು.
ಡಿಸೇನಿಯಂ ಕಾನ್ಫರೆನ್ಸ್ ನಿರ್ದೇಶಕರಾಗಿ ಡಿ.ಪಿ ಯೂಸುಫ್ ಸಖಾಫಿ ಬೈತಾರ್, ಪಿ.ಎಂ ಹಮೀದ್ ಈಶ್ವರಮಂಗಳ, ಅಲಿ ಮುಸ್ಲಿಯಾರ್ ಬಹರೈನ್ ರವರನ್ನು ಆರಿಸಲಾಯಿತು.
ಡಿಸೇನಿಯಂ ಸ್ವಾಗತ ಸಮಿತಿ ಚೇರ್ಮೆನ್ ಆಗಿ ರೈಸ್ಕೊ ಅಬೂಬಕ್ಕರ್ ಹಾಜಿ ರವರು ಆಯ್ಕೆಯಾದರು. ವರ್ಕಿಂಕ್ ಚೇರ್ಮೆನ್ ಆಗಿ ಶಾಕಿರ್ ಹಾಜಿ ಹೈಸಂ, ವೈಸ್ ಚೇರ್ಮೆನ್ಗಳಾಗಿ ತೋಕೆ ಮುಹ್ಯಿದ್ದೀನ್ ಕಾಮಿಲ್ ಸಖಾಫಿ, ಅಬೂಸುಫಿಯಾನ್ H.I ಇಬ್ರಾಹೀಂ ಮದನಿ, ಶಾಫಿ ಸಅದಿ ಬೆಂಗಳೂರು, ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಹಫೀಳ್ ಸಅದಿ ಕೊಳಕ್ಕೇರಿ, ಡಾ. ಶೇಖ್ ಬಾವ ಹಾಜಿ ಆಯ್ಕೆಯಾದರು.
ಸಮಿತಿಯ ಜನರಲ್ ಕನ್ವೀನರಾಗಿ ಮುಮ್ತಾಝ್ ಅಲಿ ಕೃಷ್ಣಾಪುರ ರವರನ್ನು ಆಯ್ಕೆ ಮಾಡಲಾಯಿತು. ವರ್ಕಿಂಗ್ ಕನ್ವೀನರಾಗಿ ಸಲೀಂ ಕನ್ಯಾಡಿ ರವರನ್ನು ಆರಿಸಲಾಯಿತು. ಸಮಿತಿಯ ಫಿನಾನ್ಸ್ ಕನ್ವೀನರಾಗಿ ಇಕ್ಬಾಲ್ ಬರಕ ರವರನ್ನು ನೇಮಿಸಲಾಯಿತು.
ಕನ್ವೀನರುಗಳಾಗಿ ಪಿ.ಪಿ ಅಹ್ಮದ್ ಕಾಮಿಲ್ ಸಖಾಪಿ ಕಾಶಿಪಟ್ನ, ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಇಸ್ಮಾಈಲ್ ಸಖಾಫಿ ಕೊಂಡಂಗೇರಿ, ಕೆ.ಕೆ.ಎಂ ಕಾಮಿಲ್ ಸಖಾಫಿ, ಅಶ್ರಫ್ ಕಿನಾರ ರವರನ್ನು ಆರಿಸಲಾಯಿತು.
ಪ್ರೊಗ್ರಾಮ್ ಕಮಿಟಿ ಕನ್ವೀನರುಗಳಾಗಿ ಎಸ್.ಪಿ ಹಂಝ ಸಖಾಫಿ ಬಂಟ್ವಾಳ, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್, ಕೆ.ಎಂ ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ ರವರನ್ನು ಆಯ್ಕೆ ಮಾಡಲಾಯಿತು.
ಮೀಡಿಯಾ ವಿಭಾಗದ ಚೀಫ್ ಕೋರ್ಡಿನೇಟರಾಗಿ ಹಸೈನಾರ್ ಆನೆಮಹಲ್ ಮತ್ತು ಮೀಡಿಯಾ ಕೋರ್ಡಿನೇಟರಾಗಿ ಶಾಕಿರ್ ಎಂಎಸ್ಸಿ ಬಜ್ಪೆ, ಸಫ್ವಾನ್ ಚಿಕ್ಕಮಗಳೂರು ಆಯ್ಕೆ ಮಾಡಲಾಯಿತು.
ಪಬ್ಲಿಸಿಟಿ ವಿಭಾಗದ ಚೀಫ್ ಕೋರ್ಡಿನೇಟರ್ ಆಗಿ ಎಂಪಿಎಂ ಅಶ್ರಫ್ ಸಅದಿ ಮಲ್ಲೂರು ಕೋರ್ಡಿನೇಟರುಗಳಾಗಿ ನವಾಝ್ ಸಖಾಫಿ ಅಡ್ಯಾರ್, ಎಂಬಿಎಂ ಸಾದಿಖ್ ಮಲೆಬೆಟ್ಟು, ಮೆಹಬೂಬ್ ಸಖಾಫಿ, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಇಬ್ರಾಹಿಂ ಮಾಲಿಕಿ ಬೋಳಂತೂರು, ಕೆಎಂ ಮುಸ್ತಫ ನಈಮಿ ಹಾವೇರಿ, ಇಸ್ಮಾಈಲ್ ಸಅದಿ ಕಿನ್ಯ ರವರನ್ನು ಆರಿಸಲಾಯಿತು.
ಅತಿಥಿ ವಿಭಾಗದ ಚೀಫ್ ಕೋರ್ಡಿನೇಟರಾಗಿ ಹಾಫಿಳ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಕೋರ್ಡಿನೇಟರುಗಳಾಗಿ ರಹೀಂ ಸಅದಿ ಖತರ್, ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ್ಯಾಃ, ಇಸ್ಹಾಖ್ ಝುಹ್ರಿ ಸೂರಿಂಜೆ, ಅಝೀಝ್ ಮಿಸ್ಬಾಹಿ ಪುತ್ತೂರು, ಇರ್ಷಾದ್ ಹಾಜಿ ಗೂಡಿನಬಳಿ, ಮನ್ಸೂರ್ ಅಲಿ ಶಿವಮೊಗ್ಗ ರವರನ್ನು ಆಯ್ಕೆ ಮಾಡಲಾಯಿತು.
ಈವೆಂಟ್ ವಿಭಾಗದ ಚೀಫ್ ಕೋರ್ಡಿನೇಟರ್ ಆಗಿ ಹಮೀದ್ ಬಜ್ಪೆ ಮತ್ತು ಕೋರ್ಡಿನೇಟರಾಗಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ರವರನ್ನು ಆಯ್ಕೆ ಮಾಡಲಾಯಿತು.
ಕಾನೂನು ಸಲಹೆಗಾರರಾಗಿ ಅಡ್ವಕೇಟ್ ಹಂಝತ್ ಉಡುಪಿ, ಸ್ವಯಂ ಸೇವಕ ವಿಭಾಗದ ಚೀಫ್ ಕೋರ್ಡಿನೇಟರಾಗಿ ಹಾಫಿಳ್ ಯಾಕೂಬ್ ಸಅದಿ ಮತ್ತು ಕೋರ್ಡಿನೇಟರುಗಳಾಗಿ ಇಸ್ಹಾಖ್ ತಂಙಳ್ ಅಡ್ಯಾರ್, ಇಕ್ಬಾಳ್ ಬಪ್ಪಳಿಗೆ, ಅಲಿ ತುರ್ಕಳಿಕೆ, ಸ್ವಾಲಿಹ್ ಮುರ ಮುಂತಾದವರನ್ನು ಅಯ್ಕೆ ಮಾಡಲಾಯಿತು.
ಇಕ್ಬಾಲ್ ಬರಕ ಸ್ವಾಗತಿಸಿ ಸಲೀಂ ಕನ್ಯಾಡಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)