ದುಬೈ: ಕೇರಳದ ತರಕಾರಿಗಳ ಆಮದನ್ನು ಸ್ಥಗಿತ ಗೊಳಿಸಿದ ಬಳಿಕ ಯಾತ್ರಾ ನಿಷೇಧವನ್ನು ಏರ್ಪಡಿಸಲಾಗುವುದೇ ಎಂದು ಗಲ್ಫ್ ನಲ್ಲಿರುವ ವಲಸಿಗರು ಶಂಕೆ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕುವೈತ್ನ ಆರೋಗ್ಯ ಸಚಿವಾಲಯ ತಿಳಿಸಿದೆ.ನಿಪಃ ವೈರಸ್ ನ ಕಾರಣದಿಂದಾಗಿ ಕೇರಳದಿಂದ ಹಣ್ಣುಗಳ ಆಮದನ್ನು ಸ್ಥಗಿತಗೊಳಿಸಲು ಇತ್ತೀಚೆಗೆ ಗಲ್ಫ್ ರಾಷ್ಟ್ರಗಳು ನಿರ್ಧರಿಸಿದ್ದವು.
ಬಾವಲಿ ಕಚ್ಚಿದ ಹಣ್ಣುಗಳಿಂದಾಗಿ ನಿಪಃ ವೈರಸ್ ತಗುಲಿದೆ ಎನ್ನುವ ಕಾರಣಕ್ಕಾಗಿ ಕೇರಳದ ಹಣ್ಣು ತರಕಾರಿಗಳ ಅಮದನ್ನು ತಡೆ ಹಿಡಿಯಲಾಗಿದೆ.
ಗಲ್ಫ್ ದೇಶಗಳಲ್ಲಿರುವ ಕೇರಳೀಯರು, ಕೇರಳಕ್ಕೆ ಪ್ರಯಾಣ ನಿಷೇಧಿಸಲಿದ್ದಾರೆ ಎನ್ನುವ ಬಗ್ಗೆ ಆತಂಕದಲ್ಲಿದ್ದಾರೆ.ಬಹ್ರೈನ್ ಮತ್ತು ಯುಎಇ ಈಗಾಗಲೇ ಕೇರಳಕ್ಕೆ ತಾತ್ಕಾಲಿಕವಾಗಿ ಪ್ರಯಾಣವನ್ನು ಬೆಳೆಸದಂತೆ ನಿರ್ದೇಶಿಸಿವೆ.ಬಹ್ರೈನ್ನ ಮುಂಬೈ ಕಾನ್ಸುಲೇಟ್ ಮತ್ತು ಯುಎಇಯ ತಿರುವನಂತಪುರಂ ಕಾನ್ಸುಲೇಟ್ ಈ ನಿರ್ದೇಶನವನ್ನು ನೀಡಿದೆ.
ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಯೋಜಿಸಲಾಗುತ್ತಿದೆ ಎಂದು ಕುವೈತ್ನ ಆರೋಗ್ಯ ಸಚಿವಾಲಯ ತಿಳಿಸಿದೆ.ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ ಎಂದು ಕುವೈತ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಊರಿಗೆ ತೆರಳಿದ ಹಲವರು ಕಾಲಾವಧಿಯ ಮುನ್ನವೇ ಗಲ್ಫ್ ಗೆ ಹಿಂದಿರುಗಿದ್ದಾರೆ.ಕೇರಳಕ್ಕೆ ತೆರಳಲು ಬಯಸಿದವರಲ್ಲಿ ಅನೇಕರು ತಮ್ಮ ಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು