ದುಬೈ: ಕೇರಳದ ತರಕಾರಿಗಳ ಆಮದನ್ನು ಸ್ಥಗಿತ ಗೊಳಿಸಿದ ಬಳಿಕ ಯಾತ್ರಾ ನಿಷೇಧವನ್ನು ಏರ್ಪಡಿಸಲಾಗುವುದೇ ಎಂದು ಗಲ್ಫ್ ನಲ್ಲಿರುವ ವಲಸಿಗರು ಶಂಕೆ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕುವೈತ್ನ ಆರೋಗ್ಯ ಸಚಿವಾಲಯ ತಿಳಿಸಿದೆ.ನಿಪಃ ವೈರಸ್ ನ ಕಾರಣದಿಂದಾಗಿ ಕೇರಳದಿಂದ ಹಣ್ಣುಗಳ ಆಮದನ್ನು ಸ್ಥಗಿತಗೊಳಿಸಲು ಇತ್ತೀಚೆಗೆ ಗಲ್ಫ್ ರಾಷ್ಟ್ರಗಳು ನಿರ್ಧರಿಸಿದ್ದವು.
ಬಾವಲಿ ಕಚ್ಚಿದ ಹಣ್ಣುಗಳಿಂದಾಗಿ ನಿಪಃ ವೈರಸ್ ತಗುಲಿದೆ ಎನ್ನುವ ಕಾರಣಕ್ಕಾಗಿ ಕೇರಳದ ಹಣ್ಣು ತರಕಾರಿಗಳ ಅಮದನ್ನು ತಡೆ ಹಿಡಿಯಲಾಗಿದೆ.
ಗಲ್ಫ್ ದೇಶಗಳಲ್ಲಿರುವ ಕೇರಳೀಯರು, ಕೇರಳಕ್ಕೆ ಪ್ರಯಾಣ ನಿಷೇಧಿಸಲಿದ್ದಾರೆ ಎನ್ನುವ ಬಗ್ಗೆ ಆತಂಕದಲ್ಲಿದ್ದಾರೆ.ಬಹ್ರೈನ್ ಮತ್ತು ಯುಎಇ ಈಗಾಗಲೇ ಕೇರಳಕ್ಕೆ ತಾತ್ಕಾಲಿಕವಾಗಿ ಪ್ರಯಾಣವನ್ನು ಬೆಳೆಸದಂತೆ ನಿರ್ದೇಶಿಸಿವೆ.ಬಹ್ರೈನ್ನ ಮುಂಬೈ ಕಾನ್ಸುಲೇಟ್ ಮತ್ತು ಯುಎಇಯ ತಿರುವನಂತಪುರಂ ಕಾನ್ಸುಲೇಟ್ ಈ ನಿರ್ದೇಶನವನ್ನು ನೀಡಿದೆ.
ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಯೋಜಿಸಲಾಗುತ್ತಿದೆ ಎಂದು ಕುವೈತ್ನ ಆರೋಗ್ಯ ಸಚಿವಾಲಯ ತಿಳಿಸಿದೆ.ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ ಎಂದು ಕುವೈತ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಊರಿಗೆ ತೆರಳಿದ ಹಲವರು ಕಾಲಾವಧಿಯ ಮುನ್ನವೇ ಗಲ್ಫ್ ಗೆ ಹಿಂದಿರುಗಿದ್ದಾರೆ.ಕೇರಳಕ್ಕೆ ತೆರಳಲು ಬಯಸಿದವರಲ್ಲಿ ಅನೇಕರು ತಮ್ಮ ಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ