ಡಿ.ಕೆ.ಎಸ್.ಸಿ. ಅಲ್ ಖರ್ಜ್ (ರಿಯಾದ್) ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಮಿತಿಯ ಅಧ್ಯಕ್ಷರಾದ ಜನಾಬ್ ಹಮೀದ್ ಹೊಸಂಗಡಿ ಇವರ ಅಧ್ಯಕ್ಷತೆಯಲ್ಲಿ ಗೂಡಿನಬಳಿ ಬಳಗದ ನಿವಾಸ ದಿಲಂನಲ್ಲಿ ಜರಗಿತು.
ಖಲೀಲ್ ಝುಹ್ರಿ ಇವರ ದುಆದ ಮೂಲಕ ಶುಭಾರಂಭಗೊಂಡ ಸಭೆಯಲ್ಲಿ ಬಶೀರ್ ಕೃಷ್ಣಾಪುರ ಖಿರಾಅತ್ ಪಾರಾಯಣಗೈದರು.
ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಹೊಸಂಗಡಿ ಸಭಿಕರನ್ನು ಸ್ವಾಗತಿಸಿದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕೋಶಾಧಿಕಾರಿ ದಾವೂದ್ ಕಜಮಾರ್ ಸಭೆಯನ್ನು ಉದ್ಘಾಟಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಮುನೀರ್ ಕೃಷ್ಣಾಪುರ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅಂಗೀಕಾರವನ್ನು ಪಡೆದುಕೊಂಡರು.
ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಜನಾಬ್ ಅಬ್ದುರ್ರಹ್ಮಾನ್ ಸುಲೈಮಾನ್ ಉಚ್ಚಿಲ ರವರ ನೇತೃತ್ವದಲ್ಲಿ 2024-2025ರ ಸಾಲಿಗೆ ಈ ಕೆಳಗಿ ಸುದೃಢವಾದ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಜಾವಿದ್ ಗೂಡಿನ ಬಳಿ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಕೃಷ್ಣಾಪುರ, ಕೋಶಾಧಿಕಾರಿಯಾಗಿ ಬದ್ರುದ್ದೀನ್ ಗುರುಪುರ, ಉಪಾದ್ಯಕ್ಷರಾಗಿ ನಾಸಿರ್ ಗೂಡಿನಬಳಿ, ಕಾರ್ಯದರ್ಶಿಗಳಾಗಿ ಶಬೀರ್ ಗೂಡಿನ ಬಳಿ, ಬಶೀರ್ ಕೃಷ್ಣಾಪುರ, ಸಲಹೆಗಾರರಾಗಿ ಹಮೀದ್ ಹೊಸಂಗಡಿ, ಸಂಚಾಲಕರಾಗಿ ರವೂಫ್ ಗೂಡಿನಬಳಿ, ಆಯ್ಕೆಗೊಂಡರು.
ನೂತನ ಜತೆಕಾರ್ಯದರ್ಶಿ ಶಬೀರ್ ಗೂಡಿನಬಳಿ ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಚ್ಚಿಲ ನಿರೂಪಿಸಿದರು.
ಮೂರು ಸ್ವಲಾತಿನೊಂದಿಗೆ ಸಭೆಯು ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ