ಡಿ.ಕೆ.ಎಸ್.ಸಿ. ಅಲ್ ಖರ್ಜ್ (ರಿಯಾದ್) ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಮಿತಿಯ ಅಧ್ಯಕ್ಷರಾದ ಜನಾಬ್ ಹಮೀದ್ ಹೊಸಂಗಡಿ ಇವರ ಅಧ್ಯಕ್ಷತೆಯಲ್ಲಿ ಗೂಡಿನಬಳಿ ಬಳಗದ ನಿವಾಸ ದಿಲಂನಲ್ಲಿ ಜರಗಿತು.
ಖಲೀಲ್ ಝುಹ್ರಿ ಇವರ ದುಆದ ಮೂಲಕ ಶುಭಾರಂಭಗೊಂಡ ಸಭೆಯಲ್ಲಿ ಬಶೀರ್ ಕೃಷ್ಣಾಪುರ ಖಿರಾಅತ್ ಪಾರಾಯಣಗೈದರು.
ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಹೊಸಂಗಡಿ ಸಭಿಕರನ್ನು ಸ್ವಾಗತಿಸಿದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕೋಶಾಧಿಕಾರಿ ದಾವೂದ್ ಕಜಮಾರ್ ಸಭೆಯನ್ನು ಉದ್ಘಾಟಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಮುನೀರ್ ಕೃಷ್ಣಾಪುರ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅಂಗೀಕಾರವನ್ನು ಪಡೆದುಕೊಂಡರು.
ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಜನಾಬ್ ಅಬ್ದುರ್ರಹ್ಮಾನ್ ಸುಲೈಮಾನ್ ಉಚ್ಚಿಲ ರವರ ನೇತೃತ್ವದಲ್ಲಿ 2024-2025ರ ಸಾಲಿಗೆ ಈ ಕೆಳಗಿ ಸುದೃಢವಾದ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಜಾವಿದ್ ಗೂಡಿನ ಬಳಿ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಕೃಷ್ಣಾಪುರ, ಕೋಶಾಧಿಕಾರಿಯಾಗಿ ಬದ್ರುದ್ದೀನ್ ಗುರುಪುರ, ಉಪಾದ್ಯಕ್ಷರಾಗಿ ನಾಸಿರ್ ಗೂಡಿನಬಳಿ, ಕಾರ್ಯದರ್ಶಿಗಳಾಗಿ ಶಬೀರ್ ಗೂಡಿನ ಬಳಿ, ಬಶೀರ್ ಕೃಷ್ಣಾಪುರ, ಸಲಹೆಗಾರರಾಗಿ ಹಮೀದ್ ಹೊಸಂಗಡಿ, ಸಂಚಾಲಕರಾಗಿ ರವೂಫ್ ಗೂಡಿನಬಳಿ, ಆಯ್ಕೆಗೊಂಡರು.
ನೂತನ ಜತೆಕಾರ್ಯದರ್ಶಿ ಶಬೀರ್ ಗೂಡಿನಬಳಿ ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಚ್ಚಿಲ ನಿರೂಪಿಸಿದರು.
ಮೂರು ಸ್ವಲಾತಿನೊಂದಿಗೆ ಸಭೆಯು ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ