ದಮ್ಮಾಮ್,ಮಾ.7: ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತೆ ಮತ್ತೆ ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಸುತ್ತಿದೆ. ದಮ್ಮಾಮ್-ಮಂಗಳೂರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅನಿರ್ದಿಷ್ಟವಾಗಿ ವಿಳಂಬವಾಗಿದೆ. ನಿನ್ನೆ ರಾತ್ರಿ 10.20ಕ್ಕೆ ದಮ್ಮಾಮ್ನಿಂದ ಮಂಗಳೂರಿಗೆ ಹೊರಡಬೇಕಿದ್ದ ವಿಮಾನ ಅನಿರ್ದಿಷ್ಟಾವಧಿ ವಿಳಂಬವಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬೋರ್ಡಿಂಗ್ ನೀಡಿದ ನಂತರ, ಸೇವೆಯನ್ನು ರದ್ದುಗೊಳಿಸಲಾಯಿತು. ಇದಾದ ಬಳಿಕ ಎರಡು ಬಾರಿ ವಿಮಾನ ಹಾರಾಟದ ಸಮಯವನ್ನು ಮರು ಕ್ರಮೀಕರಿಸಲಾಯ್ತಾದರೂ ಹಾರಾಟ ನಡೆಸಲಿಲ್ಲ.
ನಿನ್ನೆ ರಾತ್ರಿ 12.45 ಮತ್ತು ಇಂದು ಬೆಳಗ್ಗೆ 11.25ಕ್ಕೆ ಮರುನಿಗದಿ ಮಾಡಲಾಗಿತ್ತು. ಆದರೆ ಈ ಸಮಯದಲ್ಲಿ ಪ್ರಯಾಣ ಹೊರಡಲು ಅಥವಾ ಅದರ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಲು ಸಂಸ್ಥೆಯ ಅಧಿಕಾರಿಗಳು ಇನ್ನೂ ಸಿದ್ಧವಾಗಿಲ್ಲ.
ಅದೂ ಅಲ್ಲದೆ, ಪ್ರಯಾಣಿಕರಿಗೆ ವಸತಿ ಮತ್ತು ಆಹಾರ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸಲು ಕಂಪನಿ ಸಿದ್ಧವಾಗಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸೌದಿ ಪೂರ್ವ ಪ್ರಾಂತ್ಯದ ದೂರದ ಭಾಗಗಳಿಂದ ಬಂದ ಪ್ರಯಾಣಿಕರು ಸೇರಿದಂತೆ ನಿನ್ನೆಯಿಂದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಇದರಿಂದಾಗಿ ಬಹಳ ತೊಂದರೆ ಅನುಭವಿಸಿದರು. ಈ ರೀತಿ ಪ್ರಯಾಣಿಕರನ್ನು ನಿರಂತರವಾಗಿ ಸಂಕಷ್ಟಕ್ಕೆ ದೂಡುತ್ತಿರುವ ಏರ್ ಇಂಡಿಯಾದ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ