ಎಸ್.ವೈ.ಎಸ್ ರಾಜ್ಯ ಸಮಿತಿ ನಿರ್ದೇಶನದಂತೆ ದ.ಕ ವೆಸ್ಟ್ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ, ಝೋನ್ ಪದಾಧಿಕಾರಿಗಳು ಹಾಗೂ ಸರ್ಕಲ್ ಸಮಿತಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಯುನಿಟ್ ಗಳ ಆಯ್ದ ನಾಲ್ಕು ಮಂದಿ ನಾಯಕರ ಸಂಗಮವು ಮಾರ್ಚ್ ಹತ್ತು ಆದಿತ್ಯವಾರ ಅಡ್ಯಾರ್ ಕಣ್ಣೂರು ಅಲ್ ಮರ್ಕಝುಲ್ ಇಸ್ಲಾಮಿ ನಲ್ಲಿ ಮಧ್ಯಾಹ್ನ 2 ಕ್ಕೆ ನಡೆಯಲಿದೆ.
ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಯು ಇಸ್ಹಾಖ್ ಝುಹ್ರಿ ಕಾನಕೆರೆ ರವರ ಅಧ್ಯಕ್ಷತೆಯಲ್ಲಿ ನಿರ್ವಹಣಾ ಸಮಿತಿ ಕನ್ವೀನರ್ ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಾಂಘಿಕ ಕಾರ್ಯಾಚರಣೆಯ ವಿವಿಧ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ನಾಯಕರಾದ ಬಷೀರ್ ಮದನಿ ಅಲ್ ಕಾಮಿಲ್ ಕೂಳೂರು, ಪ್ರಿಂಟೆಕ್ ಅಬ್ದುರ್ರಹ್ಮಾನ್ ಹಾಜಿ ಕೃಷ್ಣಾಪುರ, ಬದ್ರುದ್ದೀನ್ ಸಖಾಫಿ ಅಲ್ ಅಝ್ಹರಿ ಕೈಕಂಬ, ಹಾಫಿಳ್ ಯಅಕೂಬ್ ಸಅದಿ ನಾವೂರು ಮಾತನಾಡುವರು.
ಸಮಾರಂಭದಲ್ಲಿ ನಮ್ಮಿಂದ ಅಗಲಿದ ರಾಜ್ಯ ಸುನ್ನೀ ಉಲಮಾ ಒಕ್ಕೂಟದ ನಾಯಕ ಮರ್ಹೂಂ ಕೆ.ಎಂ ಇಸ್ಮಾಈಲ್ ಮುಸ್ಲಿಯಾರ್ ಮಿತ್ತೂರು ಕಂಕನಾಡಿ ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಮಜ್ಲಿಸ್ ನಡೆಯಲಿದೆ, ಜಿಲ್ಲಾ ಸಮಿತಿ ಅಧೀನದ ವಿವಿಧ ಘಟಕಗಳ ಸರಿ ಸುಮಾರು ಐನೂರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ