ಎಸ್.ವೈ.ಎಸ್ ರಾಜ್ಯ ಸಮಿತಿ ನಿರ್ದೇಶನದಂತೆ ದ.ಕ ವೆಸ್ಟ್ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ, ಝೋನ್ ಪದಾಧಿಕಾರಿಗಳು ಹಾಗೂ ಸರ್ಕಲ್ ಸಮಿತಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಯುನಿಟ್ ಗಳ ಆಯ್ದ ನಾಲ್ಕು ಮಂದಿ ನಾಯಕರ ಸಂಗಮವು ಮಾರ್ಚ್ ಹತ್ತು ಆದಿತ್ಯವಾರ ಅಡ್ಯಾರ್ ಕಣ್ಣೂರು ಅಲ್ ಮರ್ಕಝುಲ್ ಇಸ್ಲಾಮಿ ನಲ್ಲಿ ಮಧ್ಯಾಹ್ನ 2 ಕ್ಕೆ ನಡೆಯಲಿದೆ.
ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಯು ಇಸ್ಹಾಖ್ ಝುಹ್ರಿ ಕಾನಕೆರೆ ರವರ ಅಧ್ಯಕ್ಷತೆಯಲ್ಲಿ ನಿರ್ವಹಣಾ ಸಮಿತಿ ಕನ್ವೀನರ್ ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಾಂಘಿಕ ಕಾರ್ಯಾಚರಣೆಯ ವಿವಿಧ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ನಾಯಕರಾದ ಬಷೀರ್ ಮದನಿ ಅಲ್ ಕಾಮಿಲ್ ಕೂಳೂರು, ಪ್ರಿಂಟೆಕ್ ಅಬ್ದುರ್ರಹ್ಮಾನ್ ಹಾಜಿ ಕೃಷ್ಣಾಪುರ, ಬದ್ರುದ್ದೀನ್ ಸಖಾಫಿ ಅಲ್ ಅಝ್ಹರಿ ಕೈಕಂಬ, ಹಾಫಿಳ್ ಯಅಕೂಬ್ ಸಅದಿ ನಾವೂರು ಮಾತನಾಡುವರು.
ಸಮಾರಂಭದಲ್ಲಿ ನಮ್ಮಿಂದ ಅಗಲಿದ ರಾಜ್ಯ ಸುನ್ನೀ ಉಲಮಾ ಒಕ್ಕೂಟದ ನಾಯಕ ಮರ್ಹೂಂ ಕೆ.ಎಂ ಇಸ್ಮಾಈಲ್ ಮುಸ್ಲಿಯಾರ್ ಮಿತ್ತೂರು ಕಂಕನಾಡಿ ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಮಜ್ಲಿಸ್ ನಡೆಯಲಿದೆ, ಜಿಲ್ಲಾ ಸಮಿತಿ ಅಧೀನದ ವಿವಿಧ ಘಟಕಗಳ ಸರಿ ಸುಮಾರು ಐನೂರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ